ಬಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲು ಪರವಾಗಿ ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರದ ವಾದ 
ದೇಶ

ಬಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲು ಪರವಾಗಿ ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರದ ವಾದ

ಮುಂಬಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲು ನೀಡುವುದರ ಪರವಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಬಲವಾದ ವಾದ ಮಂಡಿಸಿದ್ದು, ಶೇ.22.5 ರಷ್ಟು ಮೀಸಲು ನೀಡಬೇಕೆಂದು ಹೇಳಿದೆ.

ನವದೆಹಲಿ: ಮುಂಬಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲು ನೀಡುವುದರ ಪರವಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಬಲವಾದ ವಾದ ಮಂಡಿಸಿದ್ದು, ಶೇ.22.5 ರಷ್ಟು ಮೀಸಲು ನೀಡಬೇಕೆಂದು ಹೇಳಿದೆ. 
ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಸುಪ್ರೀಂ ಕೋರ್ಟ್ ನಲ್ಲಿ ಈ ಬಗ್ಗೆ ವಾದ ಮಂಡಿಸಿದ್ದು, ಸಾವಿರಾರು ವರ್ಷಗಳಿಂದ ಎಸ್ ಸಿ/ಎಸ್ ಟಿಗಳಿಗೆ ವಂಚನೆಯಾಗಿದ್ದು, ಎಸ್ ಸಿ/ ಎಸ್ ಟಿ ನೌಕರರು ಹಿಂದುಳಿದವರೆಂದು ಭಾವಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಮುಂಬಡ್ತಿಯಲ್ಲಿ ಶೇ.22.5 ರಷ್ಟು ಮೀಸಲು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದಾರೆ. 
2006 ರಲ್ಲಿ ಸುಪ್ರೀಂ ಕೋರ್ಟ್ ಆದೇಶ ಬಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲಾತಿಗೆ ವಿರುದ್ಧವಾಗಿ ಬಂದಿತ್ತು. ಅಷ್ಟೇ ಅಲ್ಲದೇ ಸರ್ಕಾರ ಬಡ್ತಿಯಲ್ಲಿನ ಮೀಸಲಾತಿಗೆ ಸಂಬಂಧಿಸಿದಂತೆ ದೃಢವಾದ ಅಂಕಿ-ಅಂಶಗಳನ್ನು ಮಂಡಿಸಿ ಸಮರ್ಥಿಸಿದರೆ ಮಾತ್ರ ಬಡ್ತಿ ನೀಡಬಹುದೆಂದು ಹೇಳಿತ್ತು.
ದೇಶದಲ್ಲಿ ಈಗಾಗಲೇ ಎಸ್ ಸಿ/ಎಸ್ ಟಿ ದೌರ್ಜನ್ಯ ಕಾಯ್ದೆಯ ಮೂಲ ನಿಬಂಧನೆಗಳನ್ನು ಮರುಸ್ಥಾಪಿಸಬೇಕೆಂಬ ಆಗ್ರಹ ಹೆಚ್ಚಾಗತೊಡಗುತ್ತಿದ್ದಂತೆಯೇ,  ಬಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲು ವಿಷಯದಲ್ಲೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗತೊಡಗಿತ್ತು. ಈ ಬೆನ್ನಲ್ಲೇ ಸುಪ್ರೀಂ ಕೋರ್ಟ್ ನಲ್ಲಿ  ಬಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲು ಪರವಾಗಿ ಕೇಂದ್ರ ಸರ್ಕಾರ ವಾದ ಮಂಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT