ಬಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲು ಪರವಾಗಿ ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರದ ವಾದ
ನವದೆಹಲಿ: ಮುಂಬಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲು ನೀಡುವುದರ ಪರವಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಬಲವಾದ ವಾದ ಮಂಡಿಸಿದ್ದು, ಶೇ.22.5 ರಷ್ಟು ಮೀಸಲು ನೀಡಬೇಕೆಂದು ಹೇಳಿದೆ.
ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಸುಪ್ರೀಂ ಕೋರ್ಟ್ ನಲ್ಲಿ ಈ ಬಗ್ಗೆ ವಾದ ಮಂಡಿಸಿದ್ದು, ಸಾವಿರಾರು ವರ್ಷಗಳಿಂದ ಎಸ್ ಸಿ/ಎಸ್ ಟಿಗಳಿಗೆ ವಂಚನೆಯಾಗಿದ್ದು, ಎಸ್ ಸಿ/ ಎಸ್ ಟಿ ನೌಕರರು ಹಿಂದುಳಿದವರೆಂದು ಭಾವಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಮುಂಬಡ್ತಿಯಲ್ಲಿ ಶೇ.22.5 ರಷ್ಟು ಮೀಸಲು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದಾರೆ.
2006 ರಲ್ಲಿ ಸುಪ್ರೀಂ ಕೋರ್ಟ್ ಆದೇಶ ಬಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲಾತಿಗೆ ವಿರುದ್ಧವಾಗಿ ಬಂದಿತ್ತು. ಅಷ್ಟೇ ಅಲ್ಲದೇ ಸರ್ಕಾರ ಬಡ್ತಿಯಲ್ಲಿನ ಮೀಸಲಾತಿಗೆ ಸಂಬಂಧಿಸಿದಂತೆ ದೃಢವಾದ ಅಂಕಿ-ಅಂಶಗಳನ್ನು ಮಂಡಿಸಿ ಸಮರ್ಥಿಸಿದರೆ ಮಾತ್ರ ಬಡ್ತಿ ನೀಡಬಹುದೆಂದು ಹೇಳಿತ್ತು.
ದೇಶದಲ್ಲಿ ಈಗಾಗಲೇ ಎಸ್ ಸಿ/ಎಸ್ ಟಿ ದೌರ್ಜನ್ಯ ಕಾಯ್ದೆಯ ಮೂಲ ನಿಬಂಧನೆಗಳನ್ನು ಮರುಸ್ಥಾಪಿಸಬೇಕೆಂಬ ಆಗ್ರಹ ಹೆಚ್ಚಾಗತೊಡಗುತ್ತಿದ್ದಂತೆಯೇ, ಬಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲು ವಿಷಯದಲ್ಲೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗತೊಡಗಿತ್ತು. ಈ ಬೆನ್ನಲ್ಲೇ ಸುಪ್ರೀಂ ಕೋರ್ಟ್ ನಲ್ಲಿ ಬಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲು ಪರವಾಗಿ ಕೇಂದ್ರ ಸರ್ಕಾರ ವಾದ ಮಂಡಿಸಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos