ಸಂಗ್ರಹ ಚಿತ್ರ 
ದೇಶ

ನೀರವ್‌ ಮೋದಿ ಗಡಿಪಾರು ಕೋರಿ ಬ್ರಿಟನ್ ಗೆ 'ಅಧಿಕೃತ ಅರ್ಜಿ' ಸಲ್ಲಿಸಿದ ಭಾರತ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಬಹುಕೋಟಿ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಭಾರತ ಮೂಲದ ಆಭರಣ ಉದ್ಯಮಿ ನೀರವ್ ಮೋದಿಯನ್ನು ಗಡಿಪಾರು ಮಾಡುವಂತೆ ಬ್ರಿಟನ್ ಸರ್ಕಾರಕ್ಕೆ ಭಾರತ ಅಧಿಕೃತ ಅರ್ಜಿ ಸಲ್ಲಿಕೆ ಮಾಡಿದೆ.

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಬಹುಕೋಟಿ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಭಾರತ ಮೂಲದ ಆಭರಣ ಉದ್ಯಮಿ ನೀರವ್ ಮೋದಿಯನ್ನು ಗಡಿಪಾರು ಮಾಡುವಂತೆ ಬ್ರಿಟನ್ ಸರ್ಕಾರಕ್ಕೆ ಭಾರತ ಅಧಿಕೃತ ಅರ್ಜಿ ಸಲ್ಲಿಕೆ ಮಾಡಿದೆ.
ಈ ಬಗ್ಗೆ ರಾಜ್ಯಸಭೆಗೆ ಮಾಹಿತಿ ನೀಡಿದ ದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ವಿ ಕೆ ಸಿಂಗ್‌ ಅವರು, ಅರ್ಥಿಕ ಅಪರಾಧಿ ನೀರವ್‌ ಮೋದಿಯ ಗಡೀಪಾರಿಗೆ ಕೋರಿ ಬ್ರಿಟನ್‌ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
'ನೀರವ್ ಮೋದಿಯನ್ನು ಗಡಿಪಾರು ಮಾಡುವಂತೆ ಕೋರಿರುವ ಅರ್ಜಿಯನ್ನು ಗೃಹ ಇಲಾಖೆಯಿಂದ ವಿದೇಶಾಂಗ ಇಲಾಖೆಗೆ ಕಳುಹಿಸಿಕೊಡಲಾಗಿದ್ದು, ಬ್ರಿಟನ್ ನಿಂದ ನೀರವ್‌ ಮೋದಿಯನ್ನು ಗಡಿಪಾರು ಮಾಡಲು ಕೋರಲಾಗಿದೆ. ಇದೇ ವಿಚಾರವಾಗಿ ಮುಂದಿನ ಪ್ರಕ್ರಿಯೆಗಳನ್ನು ನಡೆಸಿಕೊಂಡಲು ಬ್ರಿಟನ್‌ ಸರಕಾರಕ್ಕೆ ಈ ಮನವಿಯನ್ನು ರಾಯಭಾರ ಕಚೇರಿ ಮೂಲಕ ಕಳುಹಿಸಿಕೊಡಲಾಗಿದೆ' ಎಂದು ಸಿಂಗ್‌ ಹೇಳಿದ್ದಾರೆ.
ಅಂತೆಯೇ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್ ಗೆ 13,500 ಕೋಟಿ ರೂ.ವಂಚನೆ ಎಸಗಿರುವ ಆರೋಪ ಎದುರಿಸುತ್ತಿರುವ  ನೀರವ್‌ ಮೋದಿ ಒಬ್ಬ ವಜ್ರದ ವ್ಯಾಪಾರಿಯಾಗಿದ್ದು, ಆತನ ಸಹೋದರ ಸಂಬಂಧಿ ಮೇಹುಲ್‌ ಚೋಕ್ಸಿಯೊಂದಿಗೆ ಭಾರತದ ಮೋಸ್ಟ್‌ ವಾಂಟೆಡ್‌ ಅಪರಾಧಿಗಳಲ್ಲಿ ಒಬ್ಬನಾಗಿದ್ದಾನೆ. ನೀರವ್ ನ ಪಾಸ್‌ಪೋರ್ಟ್‌ಅನ್ನು ವಿದೇಶಾಂಗ ಇಲಾಖೆ ವಜಾ ಮಾಡಿದೆ ಎಂದು ಸಿಂಗ್‌ ಇದೇ ವೇಳೆ ತಿಳಿಸಿದ್ದಾರೆ.
ಇನ್ನು ಮಾದ್ಯಮ ವರದಿಗಳ ಅನ್ವಯ, 'ನೀರವ್‌ ಮೋದಿ ಬಳಿ 12ಕ್ಕೂ ಹೆಚ್ಚು ಪಾಸ್ ಪೋರ್ಟ್‌ ಇವೆ ಎಂದು ಹೇಳಲಾಗಿದ್ದು, ಬ್ರಿಟನ್ ನಲ್ಲಿ ಆಶ್ರಯ ಕೋರಿ ಅರ್ಜಿ ಸಲ್ಲಿಸಿದ್ದಾನೆ ಎನ್ನಲಾಗಿದೆ. ಹೀಗಾಗಿ ಈ ಹಿಂದೆಯೇ ನೀರವ್‌ ವಿರುದ್ಧ ರೆಡ್‌ ಕಾರ್ನರ್‌ ನೋಟಿಸ್ ಜಾರಿ ಮಾಡಲಾಗಿದ್ದು, ಇದೀಗ ಅಧಿಕೃತವಾಗಿ ನೀರವ್ ಮೋದಿ ಗಡಿಪಾರಿಗೆ ಅರ್ಜಿ ಸಲ್ಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT