ಮಾರ್ಗ ಮಧ್ಯದಲ್ಲೆ ಶೌಚಾಲಯದ ತ್ಯಾಜ್ಯ ವಿಲೇವಾರಿ: ಡಿಜಿಸಿಎಗೆ ಎನ್ ಜಿಟಿ ತರಾಟೆ 
ದೇಶ

ಮಾರ್ಗ ಮಧ್ಯದಲ್ಲೆ ಶೌಚಾಲಯದ ತ್ಯಾಜ್ಯ ವಿಲೇವಾರಿ: ಡಿಜಿಸಿಎಗೆ ಎನ್ ಜಿಟಿ ತರಾಟೆ

ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಾರ್ಯನಿರ್ವಹಣೆ ಮಾಡುವ ವಿಮಾನಗಳಿಗೆ ಮಾರ್ಗ ಮಧ್ಯದಲ್ಲೆ ಶೌಚಾಲಯದ ತ್ಯಾಜ್ಯ ವಿಲೇವಾರಿ ಮಾಡದಂತೆ ಸೂಚನೆ ನೀಡುವುದರ ಸಂಬಂಧ

ನವದೆಹಲಿ: ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಾರ್ಯನಿರ್ವಹಣೆ ಮಾಡುವ ವಿಮಾನಗಳಿಗೆ ಮಾರ್ಗ ಮಧ್ಯದಲ್ಲೆ ಶೌಚಾಲಯದ ತ್ಯಾಜ್ಯ ವಿಲೇವಾರಿ ಮಾಡದಂತೆ ಸೂಚನೆ ನೀಡುವುದರ ಸಂಬಂಧ ಡಿಜಿಸಿಎಯನ್ನು ಎನ್ ಜಿಟಿ ತರಾಟೆಗೆ ತೆಗೆದುಕೊಂಡಿದೆ. 
ವೈಮಾನಿಕ ಮಾರ್ಗದ ಮಧ್ಯೆ  ಶೌಚಾಲಯದ ತ್ಯಾಜ್ಯ ವಿಲೇವಾರಿ ಮಾಡದಂತೆ ಎಲ್ಲಾ ವಿಮಾನಗಳಿಗೂ  ಸೂಚನೆ ನೀಡುವ ವಿಚಾರದಲ್ಲಿ ನಾಗರಿಕ ವಿಮಾನಯಾನದ ನಿರ್ದೇಶಕರ ಕಚೇರಿ ವಿಳಂಬ ತೋರುತ್ತಿದ್ದು ನಿಯಮಗಳನ್ನು ಉಲ್ಲಂಘಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹಸಿರು ನ್ಯಾಯಾಧಿಕರಣ ಅಸಮಾಧಾನಗೊಂಡಿದೆ. 
ವಿಮಾನಗಳಿಗೆ ಆ.31 ರೊಳಗೆ ಸೂಚನೆ ನೀಡದೇ ಇದ್ದಲ್ಲಿ ನಾಗರಿಕ ವಿಮಾನಯಾನದ ನಿರ್ದೇಶಕರ ವೇತವನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಎನ್ ಜಿಟಿಯ ಅಧ್ಯಕ್ಷ ನ್ಯಾ. ಆದರ್ಶ್ ಕುಮಾರ್ ಗೋಯಲ್ ಎಚ್ಚರಿಕೆ ನೀಡಿದ್ದಾರೆ. ಇದಾದ ಬಳಿಕವೂ ನಿರ್ದೇಶಕರು ಯಾವುದೇ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದೂ ಎಚ್ಚರಿಸಿದೆ. 
ವೈಮಾನಿಕ ಮಾರ್ಗದ ಮಧ್ಯೆ  ಶೌಚಾಲಯದ ತ್ಯಾಜ್ಯ ವಿಲೇವಾರಿ ಮಾಡುತ್ತಿರುವುದರಿಂದ ತಮ್ಮ ಸುತ್ತಮುತ್ತಲು ಇರುವ ಮನೆಗಳಿಗೆ ಹಾನಿ ಉಂಟಾಗುತ್ತಿದೆ ಎಂದು ದೆಹಲಿಯ ನಿವಾಸಿ ನಿವೃತ್ತ ಲೆಫ್ಟಿನೆಂಟ್ ಜನರಲ್ ಸತ್ವಂತ್ ಸಿಂಗ್ ಧಿಯಾ  ಎನ್ ಜಿಟಿ ಮೆಟ್ಟಿಲೇರಿದ್ದರು. ಈ ವಿಚಾರಣೆ ನಡೆಸಿದ್ದ ಹಸಿರು ನ್ಯಾಯಾಧಿಕರಣ ಎಲ್ಲಾ ವಿಮಾನಗಳಿಗೂ  ವೈಮಾನಿಕ ಮಾರ್ಗದ ಮಧ್ಯೆ  ಶೌಚಾಲಯದ ತ್ಯಾಜ್ಯ ವಿಲೇವಾರಿ ಮಾಡದಂತೆ ಸೂಚನೆ ನೀಡಲು ಡಿಜಿಸಿಎ ಗೆ 2016 ರ ಡಿ.20 ರಂದು ಸೂಚನೆ ನೀಡಿತ್ತು. ಆದರೆ ವಿಮಾನದ ಶೌಚಾಲಯದಿಂದ ಮಾರ್ಗ ಮಧ್ಯದಲ್ಲಿ ತ್ಯಾಜ್ಯವನ್ನು ವಿಲೇವಾರಿ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ವಾದಿಸಿದ್ದ ಡಿಜಿಸಿಎ, ಎನ್ ಜಿಟಿ ಆದೆಶವನ್ನು ಮರುಪರಿಶೀಲಿಸಬೇಕೆಂದು ಮನವಿ ಮಾಡಿತ್ತು. ಆದರೆ ಈಗ ಮತ್ತೆ  ಡಿಜಿಸಿಎಯನ್ನು ತರಾಟೆಗೆ ತೆಗೆದುಕೊಂಡಿರುವ ಎನ್ ಜಿಟಿ ಕೂಡಲೇ ಎಲ್ಲಾ ವಿಮಾನಗಳಿಗೂ ಸುತ್ತೋಲೆ ಹೊರಡಿಸುವಂತೆ ಸೂಚಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT