ಸಂಗ್ರಹ ಚಿತ್ರ 
ದೇಶ

ಶೋಪಿಯಾನ್ ಎನ್ ಕೌಂಟರ್; 5 ಉಗ್ರರ ಹತ್ಯೆ, ಕಾರ್ಯಾಚರಣೆ ಮುಂದುವರಿಕೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರೆದಿದ್ದು, ಸೋಪೋರ್, ಕುಪ್ವಾರ ದಾಳಿ ಬೆನ್ನಲ್ಲೇ ಮತ್ತೆ ಉಗ್ರರು ಶೋಪಿಯಾನ್ ನಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಸೈನಿಕರು ನಡೆಸಿದ ಪ್ರತಿದಾಳಿಯಲ್ಲಿ 5 ಮಂದಿ ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರೆದಿದ್ದು, ಸೋಪೋರ್, ಕುಪ್ವಾರ ದಾಳಿ ಬೆನ್ನಲ್ಲೇ ಮತ್ತೆ ಉಗ್ರರು ಶೋಪಿಯಾನ್ ನಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಸೈನಿಕರು ನಡೆಸಿದ ಪ್ರತಿದಾಳಿಯಲ್ಲಿ 5 ಮಂದಿ ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.
ರಾಜಧಾನಿ ಶ್ರೀನಗರದಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ಶೋಪಿಯಾನ್ ನಲ್ಲಿ ಉಗ್ರರು ಮತ್ತು ಸೇನಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಸೇನಾಪಡೆಗಳ ದಾಳಿಗೆ ಐದು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ.
ಸೇನಾ ಮೂಲಗಳ ಪ್ರಕಾರ ಶೋಪಿಯಾನ್ ನಲ್ಲಿ ಉಗ್ರರ ಇರುವಿಕೆ ಕುರಿತು ಮಾಹಿತಿ ಪಡೆದ ಸೇನಾಧಿಕಾರಿಗಳ ತಡ ರಾತ್ರಿಯಲ್ಲೇ ಪ್ರದೇಶವನ್ನು ಸುತ್ತುವರೆದಿದ್ದಾರೆ. ಅತ್ತ ಸೇನೆ ಆಗಮಿಸುತ್ತಿದ್ದಂತೆಯೇ ಎಚ್ಚೆತ್ತ ಉಗ್ರರು ಗುಂಡಿನ ಸುರಿಮಳೆ ಆರಂಭಿಸಿದ್ದಾರೆ. ಈ ವೇಳೆ ಸೇನೆ ನಡೆಸಿದ ಪ್ರತಿದಾಳಿಯಲ್ಲಿ ಕನಿಷ್ಠ ಐದು ಮಂದಿ ಉಗ್ರರು ಸಾವನ್ನಪ್ಪಿದ್ದು, ಈ ಪೈಕಿ ಓರ್ವ ಉಗ್ರನ ಶವವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಮತದೇಹದ ಬಳಿ ಬಿದ್ದಿದ್ದ ಎಕೆ 47 ರೈಫಲ್ ಮತ್ತು ಹಲವು ಮ್ಯಾಗಜಿನ್ ಗಳನ್ನೂ ಕೂಡ ವಶಪಡಿಸಿಕೊಂಡಿದ್ದಾರೆ.
ಮೃತ ಉಗ್ರನನ್ನು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಉಗ್ರ ಉಮರ್ ಮಲಿಕ್ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT