ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರುಣಾನಿಧಿ ಕುಟುಂಬ ಸದಸ್ಯರೊಂದಿಗೆ ಮಾತುಕತೆ 
ದೇಶ

ಕರುಣಾನಿಧಿ ಆರೋಗ್ಯ ವಿಚಾರಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಚೆನ್ನೈನಲ್ಲಿರುವ ಕಾವೇರಿ ಆಸ್ಪತ್ರೆಗೆ ಆಗಮಿಸಿ ಡಿಎಂಕೆ ಹಿರಿಯ ನಾಯಕ ಕರುಣಾನಿಧಿ ಅವರ ಆರೋಗ್ಯ ವಿಚಾರಿಸಿದರು.

 ಚೆನ್ನೈ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಚೆನ್ನೈನಲ್ಲಿರುವ ಕಾವೇರಿ ಆಸ್ಪತ್ರೆಗೆ  ಆಗಮಿಸಿ  ಡಿಎಂಕೆ ಹಿರಿಯ ನಾಯಕ ಕರುಣಾನಿಧಿ ಅವರ ಆರೋಗ್ಯ ವಿಚಾರಿಸಿದರು.

ಹೈದ್ರಾಬಾದ್ ನಿಂದ ಆಗಮಿಸಿದ ರಾಷ್ಟ್ರಪತಿ , ವಿಮಾನ ನಿಲ್ದಾಣದಿಂದ ನೇರವಾಗಿ  ಕರುಣಾನಿಧಿ ಚಿಕಿತ್ಸೆ ಪಡೆಯುತ್ತಿರುವ ಕಾವೇರಿ ಆಸ್ಪತ್ರೆಗೆ  ಆಗಮಿಸಿದರು.

ನಂತರ ಆಸ್ಪತ್ರೆಯಲ್ಲಿದ್ದ  ಡಿಎಂಕೆ ಕಾರ್ಯಾಧ್ಯಕ್ಷ ಎಂ. ಕೆ. ಸ್ಟಾಲಿನ್ , ಮತ್ತು ಡಿಎಂಕೆ ಸಂಸದೆ ಕನ್ನಿಮೊಳಿ ಅವರೊಂದಿಗೆ ಕರುಣಾನಿಧಿ ಆರೋಗ್ಯ ಕುರಿತಂತೆ   ರಾಮನಾಥ್ ಕೋವಿಂದ್ ಮಾಹಿತಿ ಪಡೆದುಕೊಂಡರು.

ಕರುಣಾನಿಧಿ ಆರೋಗ್ಯ ಕುರಿತಂತೆ ಅವರ ಕುಟುಂಬ ಸದಸ್ಯರು ಹಾಗೂ ವೈದ್ಯರಿಂದ ಮಾಹಿತಿ ಪಡೆದುಕೊಂಡಿದ್ದು, ಅವರು ಬೇಗನೆ ಗುಣಮುಖರಾಗಲಿ ಎಂದು  ಹಾರೈಸುವುದಾಗಿ  ರಾಷ್ಟ್ರಪತಿ ಭವನದ ಅಧಿಕೃತ ಟ್ವಿಟರ್ ನಲ್ಲಿ ಹೇಳಲಾಗಿದೆ.

 ರಾಮನಾಥ್ ಕೋವಿಂದ್ ಅವರೊಂದಿಗೆ  ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಕೂಡಾ ಹಾಜರಿದ್ದರು.  

ಹಲವು ಹಿರಿಯ ನಾಯಕರು ಹಾಗೂ ರಾಜಕಾರಣಿಗಳು ಆಸ್ಪತ್ರೆಯಲ್ಲಿರುವ ಕರುಣಾನಿಧಿ ಅವರನ್ನು ಭೇಟಿಯಾಗಲು ಆಗಮಿಸುತ್ತಿದ್ದಾರೆ. ಕಳೆದ ವಾರ ಉಪರಾಷ್ಟ್ರಪತಿ  ಎಂ. ವೆಂಕಯ್ಯನಾಯ್ಡು ಆಸ್ಪತ್ರೆಗೆ ಆಗಮಿಸಿ  ಆರೋಗ್ಯ ವಿಚಾರಿಸಿದ್ದರು. ನಿನ್ನೆ ದಿನ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೇಂದ್ರ ಸಚಿವ ಸುರೇಶ್ ಪ್ರಭು ಭೇಟಿ ನೀಡಿದ್ದರು.

ರಕ್ತದೊತ್ತಡ ಸಮಸ್ಯೆಯಿಂದಾಗಿ  ಜುಲೈ 28 ರಿಂದ ಕರುಣಾನಿಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT