ಎನ್ ಚಂದ್ರಬಾಬು ನಾಯ್ಡು 
ದೇಶ

ತಮ್ಮ ಅಂಗಾಂಗ ದಾನ ಮಾಡುವುದಾಗಿ ಘೋಷಿಸಿದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ತಮ್ಮ ದೇಹದ ಅಂಗಾಂಗಳನ್ನುದಾನ ಮಾಡುವುದಾಗಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು...

ಅಮರಾವತಿ: ತಮ್ಮ ದೇಹದ ಅಂಗಾಂಗಳನ್ನುದಾನ ಮಾಡುವುದಾಗಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಸೋಮವಾರ ಘೋಷಿಸಿದ್ದಾರೆ.
ಇಂದಿನಿಂದ ಆರಂಭವಾಗಿರುವ ಅಂಗಾಂಗ ದಾನ ವಾರ ಹಿನ್ನೆಲೆಯಲ್ಲಿ ಕೆಲವು ದಿನಗಳ ಹಿಂದಷ್ಟೇ ಆಂಧ್ರ ಸಿಎಂ ನಿಮ್ಮ ಅಂಗಾಗಳನ್ನು ದಾನ ಮಾಡುವಂತೆ ರಾಜ್ಯದ ಜನತೆಗೆ ಕರೆ ನೀಡಿದ್ದರು. ಇಂದು ಸ್ವತಃ ತಾವೇ ದೇಹ ದಾನ ಮಾಡುವುದಾಗಿ ಹೇಳುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ಮುಖ್ಯಮಂತ್ರಿಗಳ ಅಂಗಾಂಗ ದಾನ ಕರೆಗೆ ಸ್ಪಂದಿಸಿದ ನಗರಸಭೆ ಪ್ರದೇಶಗಳ ಬಡತನ ನಿರ್ಮೂಲನೆ ಮಿಷನ್(ಎಂಇಪಿಎಂಎ) ಅಂಗಾಂಗ ದಾನ ಒಂದು ಚಳವಳಿಯಾಗಿ ತೆಗೆದುಕೊಂಡಿದೆ.
ಇದುವರೆಗೆ 1.20 ಲಕ್ಷ ಜನರು ತಮ್ಮ ಅಂಗಾಂಗ ದಾನ ಮಾಡಿದ್ದು, ಎಂಇಪಿಎಂಎ ಅವರಿಂದ ಒಪ್ಪಿಗೆ ಪತ್ರಗಳನ್ನು ಪಡೆದಿದೆ.
ಅಪಘಾತದಲ್ಲಿ ಮೆದುಳು ನಿಷ್ಕ್ರಿಯೆಗೊಂಡರೆ, ಅವರ ಅಂಗಾಂಗಳನ್ನು ದಾನ ಮಾಡುವ ಬಗ್ಗೆ ಅರಿವು ಮೂಡಿಸಬೇಕು. ಜನ ಕುರುಡು ನಂಬಿಕೆಯಿಂದ ಹೊರಗೆ ಬರಬೇಕು ಮತ್ತು ದೇಹ ದಾನ ಮಾಡಬೇಕು ಎಂದಿರುವ ಆಂಧ್ರ ಸಿಎಂ, ಅಂಗಾಂಗ ದಾನ ವಾರ ಆರಂಭವಾದ ಒಂದೇ ದಿನದಲ್ಲಿ 1.20 ಲಕ್ಷ ಮಂದಿ ದಾನ ಮಾಡಿರುವುದು ಐತಿಹಾಸಿಕ. ಅಂತಹ ಉತ್ತಮ ಕೆಲಸ ಮಾಡುವತ್ತಿರುವ ಎಂಇಪಿಎಂಎ ಅನ್ನು ನಾನು ಅಭಿನಂದಿಸುತ್ತೇನೆ ಎಂದು ಚಂದ್ರಬಾಬು ನಾಯ್ಡು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ನಾನು ಸೋತಿದ್ದೇನೆ, ಸತ್ತಿಲ್ಲ: TMC ಕೇಂದ್ರ ಕಚೇರಿಗೆ ಬಿಗ... ಬಂಡಾಯ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ಗರಂ

E20 Petrol: ವೈಜ್ಞಾನಿಕ ಪರೀಕ್ಷೆಗಳಲ್ಲಿ ಸುರಕ್ಷಿತ, ವಾಹನಗಳಿಗೆ ಅತ್ಯುತ್ತಮ; ತಜ್ಞರ ಸಮರ್ಥನೆ

ಮೆಲ್ಬೋರ್ನ್ ಭೇಟಿಗೂ ಮುನ್ನ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಆಸ್ಟ್ರೇಲಿಯಾದಿಂದ ತನಿಖೆ