ಕರುಣಾನಿಧಿ , ಸ್ಟಾಲಿನ್ 
ದೇಶ

ಕರುಣಾನಿಧಿ ಆರೋಗ್ಯ ಮತ್ತಷ್ಟು ಕ್ಷೀಣ, ಮುಂದಿನ 24 ಗಂಟೆ ನಿರ್ಣಾಯಕ: ಆಸ್ಪತ್ರೆ

ಕಳೆದ 10 ದಿನಗಳಿಂದ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿಎಂಕೆ ವರಿಷ್ಠ ಕರುಣಾನಿಧಿ ಅವರ ಆರೋಗ್ಯ ಮತ್ತಷ್ಟು ಕ್ಷೀಣಗೊಂಡಿದ್ದು, ಅವರ ಅಂಗಾಂಗಗಳನ್ನು ಸಹಜ ಸ್ಥಿತಿಯಲ್ಲಿಡುವುದು ಸವಾಲು ಆಗಿದೆ ಎಂದು ಆಸ್ಪತ್ರೆ ಹೇಳಿಕೆ ನೀಡಿದೆ.

ಚೆನ್ನೈ : ಕಳೆದ 10 ದಿನಗಳಿಂದ  ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿಎಂಕೆ ವರಿಷ್ಠ ಕರುಣಾನಿಧಿ ಅವರ ಆರೋಗ್ಯ ಮತ್ತಷ್ಟು ಕ್ಷೀಣಗೊಂಡಿದ್ದು,  ಅವರ  ಅಂಗಾಂಗಗಳನ್ನು ಸಹಜ ಸ್ಥಿತಿಯಲ್ಲಿಡುವುದು  ಸವಾಲು ಆಗಿದೆ ಎಂದು ಆಸ್ಪತ್ರೆ  ಹೇಳಿಕೆ ನೀಡಿದೆ.

94 ವರ್ಷದ ಮಾಜಿ ತಮಿಳುನಾಡು ಮುಖ್ಯಮಂತ್ರಿ ಅವರನ್ನು ನಿರಂತರವಾಗಿ ತಪಾಸಣೆ ನಡೆಸಲಾಗುತ್ತಿದ್ದು, ನುರಿತ  ವೈದ್ಯರ  ಸಹಕಾರದೊಂದಿಗೆ  ಚಿಕಿತ್ಸೆ ನೀಡಲಾಗುತ್ತಿದೆ ಎಂದು  ಕಾವೇರಿ ಆಸ್ಪತ್ರೆಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ವಯೋ ಸಹಜ ಸಮಸ್ಯೆಯಿಂದಾಗಿ  ಅಂಗಾಂಗಗಳ ಕಾರ್ಯನಿರ್ವಹಣೆಯನ್ನು  ಸಮಸ್ಯೆಯಾಗದಂತೆ ನಿಗಾವಹಿಸಲಾಗಿದೆ. ಆದರೆ ಕರುಣಾನಿಧಿ ಅವರ ಪರಿಸ್ಥಿತಿ ಮತ್ತಷ್ಟು ಕ್ಷೀಣಿಸಿದೆ. ಮುಂದಿನ  24 ಗಂಟೆಗಳಲ್ಲಿ ಚಿಕಿತ್ಸೆಗೆ ಅವರು ಹೇಗೆ ಸ್ಪಂದಿಸುತ್ತಾರೆ ಎಂಬುದು  ಅವರ ಆರೋಗ್ಯವನ್ನು ನಿರ್ಧರಿಸಲಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಅರವಿಂದನ್ ಸೆಲ್ವರಾಜ್ ಹೇಳಿದ್ದಾರೆ.

ರಕ್ತದೊತ್ತಡ ಸಮಸ್ಯೆಯಿಂದಾಗಿ ಕರುಣಾನಿಧಿ ಜುಲೈ 28 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ತದನಂತರ ಅವರ ಆರೋಗ್ಯ ಕ್ಷೀಣಿಸಿದೆ ಎಂದು ವೈದ್ಯರು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT