ಕರುಣಾನಿಧಿ , ಸ್ಟಾಲಿನ್ 
ದೇಶ

ಕರುಣಾನಿಧಿ ಆರೋಗ್ಯ ಮತ್ತಷ್ಟು ಕ್ಷೀಣ, ಮುಂದಿನ 24 ಗಂಟೆ ನಿರ್ಣಾಯಕ: ಆಸ್ಪತ್ರೆ

ಕಳೆದ 10 ದಿನಗಳಿಂದ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿಎಂಕೆ ವರಿಷ್ಠ ಕರುಣಾನಿಧಿ ಅವರ ಆರೋಗ್ಯ ಮತ್ತಷ್ಟು ಕ್ಷೀಣಗೊಂಡಿದ್ದು, ಅವರ ಅಂಗಾಂಗಗಳನ್ನು ಸಹಜ ಸ್ಥಿತಿಯಲ್ಲಿಡುವುದು ಸವಾಲು ಆಗಿದೆ ಎಂದು ಆಸ್ಪತ್ರೆ ಹೇಳಿಕೆ ನೀಡಿದೆ.

ಚೆನ್ನೈ : ಕಳೆದ 10 ದಿನಗಳಿಂದ  ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿಎಂಕೆ ವರಿಷ್ಠ ಕರುಣಾನಿಧಿ ಅವರ ಆರೋಗ್ಯ ಮತ್ತಷ್ಟು ಕ್ಷೀಣಗೊಂಡಿದ್ದು,  ಅವರ  ಅಂಗಾಂಗಗಳನ್ನು ಸಹಜ ಸ್ಥಿತಿಯಲ್ಲಿಡುವುದು  ಸವಾಲು ಆಗಿದೆ ಎಂದು ಆಸ್ಪತ್ರೆ  ಹೇಳಿಕೆ ನೀಡಿದೆ.

94 ವರ್ಷದ ಮಾಜಿ ತಮಿಳುನಾಡು ಮುಖ್ಯಮಂತ್ರಿ ಅವರನ್ನು ನಿರಂತರವಾಗಿ ತಪಾಸಣೆ ನಡೆಸಲಾಗುತ್ತಿದ್ದು, ನುರಿತ  ವೈದ್ಯರ  ಸಹಕಾರದೊಂದಿಗೆ  ಚಿಕಿತ್ಸೆ ನೀಡಲಾಗುತ್ತಿದೆ ಎಂದು  ಕಾವೇರಿ ಆಸ್ಪತ್ರೆಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ವಯೋ ಸಹಜ ಸಮಸ್ಯೆಯಿಂದಾಗಿ  ಅಂಗಾಂಗಗಳ ಕಾರ್ಯನಿರ್ವಹಣೆಯನ್ನು  ಸಮಸ್ಯೆಯಾಗದಂತೆ ನಿಗಾವಹಿಸಲಾಗಿದೆ. ಆದರೆ ಕರುಣಾನಿಧಿ ಅವರ ಪರಿಸ್ಥಿತಿ ಮತ್ತಷ್ಟು ಕ್ಷೀಣಿಸಿದೆ. ಮುಂದಿನ  24 ಗಂಟೆಗಳಲ್ಲಿ ಚಿಕಿತ್ಸೆಗೆ ಅವರು ಹೇಗೆ ಸ್ಪಂದಿಸುತ್ತಾರೆ ಎಂಬುದು  ಅವರ ಆರೋಗ್ಯವನ್ನು ನಿರ್ಧರಿಸಲಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಅರವಿಂದನ್ ಸೆಲ್ವರಾಜ್ ಹೇಳಿದ್ದಾರೆ.

ರಕ್ತದೊತ್ತಡ ಸಮಸ್ಯೆಯಿಂದಾಗಿ ಕರುಣಾನಿಧಿ ಜುಲೈ 28 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ತದನಂತರ ಅವರ ಆರೋಗ್ಯ ಕ್ಷೀಣಿಸಿದೆ ಎಂದು ವೈದ್ಯರು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT