ನಿತೀಶ್ ಕುಮಾರ್ 
ದೇಶ

ಎಲ್ಲಾ ನಿರಾಶ್ರಿತರ ಶಿಬಿರ ಪರಿಶೀಲಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿತೀಶ್ ಕಮಾರ್ ಸೂಚನೆ

ಮುಜಫರ್ ಪುರ್ ಜಿಲ್ಲೆಯ ನಿರಾಶ್ರಿತ ಶಿಬಿರದ ಲೈಂಗಿಕ ಹಗರಣದಿಂದ ಎಚ್ಚೆತ್ತುಕೊಂಡ ಬಿಹಾರ ಮುಖ್ಯಮಂತ್ರಿ

ಮುಜಾಫರ್ ಫುರ: ಮುಜಫರ್ ಪುರ್ ಜಿಲ್ಲೆಯ ನಿರಾಶ್ರಿತ ಶಿಬಿರದ ಲೈಂಗಿಕ ಹಗರಣದಿಂದ ಎಚ್ಚೆತ್ತುಕೊಂಡ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ರಾಜ್ಯದ ಎಲ್ಲಾ ಮಕ್ಕಳ ಮತ್ತು ಮಹಿಳಾ ನಿರಾಶ್ರಿತ ಶಿಬಿರಗಳನ್ನು ಪರಿಶೀಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೋಮವಾರ ಸೂಚಿಸಿದ್ದಾರೆ.
ಮಕ್ಕಳ ಮತ್ತು ಮಹಿಳೆಯರ ಸುರಕ್ಷತೆಗಾಗಿ ಈ ಕೂಡಲೇ ಎಲ್ಲಾ ನಿರಾಶ್ರಿತ ಶಿಬಿರಗಳಿಗೆ ಸೂಕ್ತ ಭದ್ರತೆ ನೀಡುವಂತೆಯೂ ಬಿಹಾರ ಸಿಎಂ ಆದೇಶಿಸಿದ್ದಾರೆ.
ಮುಜಾಫರ್ ಪುರ ಲೈಂಗಿಕ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದ್ದು, ಸಿಬಿಐ ತಂಡ ಈಗಾಗಲೇ ನಿರಾಶ್ರಿತ ಶಿಬಿರ ತಲುಪಿದ್ದು, ತನಿಖೆ ಮುಂದುವರೆಸಿದೆ.
ಮುಜಾಫರ್ ಪುರ ನಿರಾಶ್ರಿತ ಶಿಬಿರದಲ್ಲಿದ್ದ 44 ಬಾಲಕಿಯರನ್ನು ರಕ್ಷಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 11 ಉದ್ಯೋಗಿಗಳನ್ನು ಈಗಾಗಲೇ ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT