ಸುಪ್ರೀಂಕೋರ್ಟ್ 
ದೇಶ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಕೆ.ಎಂ. ಜೋಸೆಫ್ ಸೇರಿ ಮೂವರು ಅಧಿಕಾರ ಸ್ವೀಕಾರ

ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್, ಇಂದಿರಾ ಬ್ಯಾನರ್ಜಿ ಮತ್ತು ವಿನೀತ್ ಶರಣ್ ಅವರು ಸುಪ್ರೀಂಕೋರ್ಟ್ ನ್ಯಾಯಾಮೂರ್ತಿಗಳಾಗಿ ಮಂಗಳವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ...

ನವದೆಹಲಿ: ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್, ಇಂದಿರಾ ಬ್ಯಾನರ್ಜಿ ಮತ್ತು ವಿನೀತ್ ಶರಣ್ ಅವರು ಸುಪ್ರೀಂಕೋರ್ಟ್ ನ್ಯಾಯಾಮೂರ್ತಿಗಳಾಗಿ ಮಂಗಳವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ. 
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ನಡೆದ ಸಮಾರಂಭದಲ್ಲಿ ಮೂವರು ನ್ಯಾಯಮೂರ್ತಿಗಳು ಅಧಿಕಾರ ಸ್ವೀಕಾರ ಮಾಡಿದ್ದಾರೆ. 
ಮೊದಲಿಗೆ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿಯವರು ಪ್ರಮಾಣ ಸ್ವೀಕರಿಸಿದರು. ನಂತರ ಶರಣ್ ಮತ್ತು ಜೋಸೆಫ್ ಅವರು ಪ್ರಮಾಣ ಸ್ವೀಕರಿಸಿದರು. 
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು, ಎಲ್ಲಾ ನ್ಯಾಯಾಧೀಶರು, ಕಾನೂನು ಅಧಿಕಾರಿಗಳು ಹಾಗೂ ವಕೀಲರ ಸಮ್ಮುಖದಲ್ಲಿ ಪ್ರತಿಜ್ಞಾವಿಧಿ ಬೋಧಿಸಿದರು. 
ಮೂವರು ನ್ಯಾಯಾಧೀಶರು ಅಧಿಕಾರ ಸ್ವೀಕಾರ ಮಾಡಿದ ಹಿನ್ನಲೆಯಲ್ಲಿ ಇದೀಗ ಸುಪ್ರೀಂಕೋರ್ಟ್ ನ್ಯಾಯಾಧೀಶರ ಸಂಖ್ಯೆ 25ಕ್ಕೆ ಹೆಚ್ಚಿದೆ. 
ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿಯವರು 2002ರ ಫೆಬ್ರವರಿಯಲ್ಲಿ ಕೋಲ್ಕತಾ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2016ರ ಆಗಸ್ಟ್ 8 ರಂದು ದೆಹಲಿ ಹೈಕೋರ್ಟ್'ಗೆ ವರ್ಗಾವಣೆಗೊಂಡ ಅವರು, 2017ರ ಏಪ್ರಿಲ್ 5 ರಂದು ಮದ್ರಾಸ್ ಹೈಕೋರ್ಟ್'ನ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದುಕೊಂಡಿದ್ದರು. 
ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ಅವರು 2004ರ ಅಕ್ಟೋಬರ್ 14 ರಂದು ಕೇರಳ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2014ರ ಜುಲೈ 18 ರಂದು ಉತ್ತರಾಖಂಡ ಹೈಕೋರ್ಟ್'ನ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದಿದ್ದರು.
ನ್ಯಾಯಮೂರ್ತಿ ವಿನೀತ್ ಶರಣ್ ಅವರು, 2002ರ ಫೆಬ್ರವರಿ 14ರಂದು ಅಲಹಾಬಾದ್ ಹೈಕೋರ್ಟ್ ನಲ್ಲಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2015ರ ಫೆಬ್ರವರಿ 16ರಂದು ಕರ್ನಾಟಕ ಹೈಕೋರ್ಟ್'ಗೆ ವರ್ಗಾವಣೆಯಾಗಿದ್ದರು. 2016ರ ಫೆಬ್ರವರಿ 26ರಂದು ಒಡಿಶಾ ಹೈಕೋರ್ಟ್'ನ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದುಕೊಂಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT