ಬಿಹಾರ ವಸತಿ ನಿಲಯ ಹಗರಣ: ನಿತೀಶ್ ಕುಮಾರ್ ಭೇಟಿ ಬೆನ್ನಲ್ಲೇ ರಾಜೀನಾಮೆ ನೀಡಿದ ಸಚಿವೆ ಮಂಜು ವರ್ಮ 
ದೇಶ

ಬಿಹಾರ ವಸತಿ ನಿಲಯ ಹಗರಣ: ನಿತೀಶ್ ಕುಮಾರ್ ಭೇಟಿ ಬೆನ್ನಲ್ಲೇ ಸಚಿವೆ ಮಂಜು ವರ್ಮ ರಾಜೀನಾಮೆ

ಬಿಹಾರ ವಸತಿ ನಿಲಯದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದ್ದ ಪ್ರಕರಣದಲ್ಲಿ ಕೊನೆಗೂ ಸಚಿವರ ತಲೆದಂಡವಾಗಿದೆ.

ಪಾಟ್ನಾ: ಬಿಹಾರ ವಸತಿ ನಿಲಯದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದ್ದ ಪ್ರಕರಣದಲ್ಲಿ ಕೊನೆಗೂ ಸಚಿವರ ತಲೆದಂಡವಾಗಿದೆ. 
ವಿಪಕ್ಷಗಳಷ್ಟೇ ಅಲ್ಲದೇ ಸರ್ಕಾರದ ಭಾಗವಾಗಿರುವ ಬಿಜೆಪಿ ಸಹ ಸಚಿವರ ರಾಜೀನಾಮೆ ಆಗ್ರಹಿಸಿದ್ದರೂ ಈ ವರೆಗೂ ಸಮಾಜ ಕಲ್ಯಾಣ ಸಚಿವರು ರಾಜೀನಾಮೆ ನೀಡಿರಲಿಲ್ಲ. ಒತ್ತಡ ಹೆಚ್ಚುತ್ತಿದ್ದಂತೆಯೇ ಮುಜುಗರಕ್ಕೊಳಗಾದ ಸಿಎಂ ನಿತೀಶ್ ಕುಮಾರ್ ಮಂಜು ವರ್ಮ ರಾಜೀನಾಮೆ ಅಂಗೀಕರಿಸಿದ್ದಾರೆ. ಸಿಎಂ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿದ ಕೆಲವೇ ನಿಮಿಷಗಳಲ್ಲಿ ಮಂಜು ವರ್ಮ ರಾಜೀನಾಮೆ ನೀಡಿದ್ದಾರೆ. 
ಸಚಿವರ ರಾಜೀನಾಮೆಗಾಗಿ ಒತ್ತಡ ಹೆಚ್ಚಾಗುತ್ತಿದ್ದಂತೆ ನಿತೀಶ್ ಕುಮಾರ್ ತಮ್ಮನ್ನು ಭೇಟಿ ಮಾಡಲು ಸಚಿವರಿಗೆ ಸೂಚಿಸಿದ್ದರು. ಭೇಟಿ ವೇಳೆ ರಾಜೀನಾಮೆ ನೀಡುವಂತೆ ನಿತೀಶ್ ಕುಮಾರ್ ಸೂಚನೆಯ ಹಿನ್ನೆಲೆಯಲ್ಲಿ ಮಂಜು ವರ್ಮಾ ರಾಜೀನಾಮೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಮಂಜು ವರ್ಮಾ ಅವರನ್ನು ಸಮರ್ಥಿಸಿಕೊಳ್ಳುತ್ತಿದ್ದ ನಿತೀಶ್ ಕುಮಾರ್, ಪ್ರಕರಣದಲ್ಲಿ ಸಚಿವರ ಪಾತ್ರ ಇರುವುದಕ್ಕೆ ಪುರಾವೆ ದೊರೆತ ತಕ್ಷಣ ಅವರು ರಾಜೀನಾಮೆ ನೀಡಲಿದ್ದಾರೆ ಎಂದಿದ್ದರು. 
ಲೈಂಗಿಕ ಕಿರುಕುಳ ನೀಡಲಾಗುತ್ತಿದ್ದ ವಸತಿ ನಿಲಯವನ್ನು ನಿರ್ವಹಣೆ ಮಾಡುತ್ತಿದ್ದ ಎನ್ ಜಿಒ ಮುಖ್ಯಸ್ಥ ಬ್ರಜೇಶ್ ಠಾಕೂರ್ ಅವರೊಂದಿಗೆ ಸಚಿವರ ಪತಿ ಚಂದೇಶ್ವರ್ ವರ್ಮ ನಿರಂತರ ಸಂಪರ್ಕದಲ್ಲಿದ್ದರು, ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೂ ಸಚಿವರ ಪತಿಗೂ ಸಂಬಂಧವಿರುವ  ಬಗ್ಗೆ ತನಿಖೆ ನಡೆಸಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT