ಅರುಣ್ ಜೇಟ್ಲಿ 
ದೇಶ

ನಾಳೆ ರಾಜ್ಯಸಭೆ ಉಪಸಭಾಪತಿ ಚುನಾವಣೆ : ಅರುಣ್ ಜೇಟ್ಲಿ ಪಾಲ್ಗೊಳ್ಳುವ ಸಾಧ್ಯತೆ

ನಾಳೆ ರಾಜ್ಯಸಭೆಯ ಉಪಸಭಾಪತಿ ಚುನಾವಣೆ ನಡೆಯಲಿದ್ದು, ವಿತ್ತ ಸಚಿವ ಅರುಣ್ ಜೇಟ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

 ನವದೆಹಲಿ: ನಾಳೆ ರಾಜ್ಯಸಭೆಯ ಉಪಸಭಾಪತಿ ಚುನಾವಣೆ ನಡೆಯಲಿದ್ದು, ವಿತ್ತ ಸಚಿವ ಅರುಣ್ ಜೇಟ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

 ರಾಜ್ಯಸಭೆಯ  ನಾಯಕರಾಗಿರುವ ಅರುಣ್ ಜೇಟ್ಲಿ ಮೇ ತಿಂಗಳಲ್ಲಿ  ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಹಿನ್ನೆಲೆಯಲ್ಲಿ ಅಂದಿನಿಂದ   ಸಂಸತ್ ಕಲಾಪದಲ್ಲಿ ಪಾಲ್ಗೊಂಡಿರಲಿಲ್ಲ. ನಾಳೆ  ಮೊದಲ ಬಾರಿಗೆ  ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಉಪಸಭಾಪತಿ ಚುನಾವಣೆಯಲ್ಲಿ ಅರುಣ್ ಜೇಟ್ಲಿ ಪಾಲ್ಗೊಳ್ಳಲಿದ್ದು, ಮತ ಚಲಾಯಿಸಲಿದ್ದಾರೆ ಎಂಬಂತಹ ಮಾಹಿತಿಗಳು ತಿಳಿದುಬಂದಿದೆ.

65 ವರ್ಷದ ಅರುಣ್ ಜೇಟ್ಲಿ ಏಪ್ರಿಲ್  1 ರಿಂದಲೇ ಕಚೇರಿಗೆ ಬರುತ್ತಿರಲಿಲ್ಲ. ಮೇ 14 ರಂದು ಅವರಿಗೆ  ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಯಾಗಿತ್ತು.  ನಂತರ ರೈಲ್ವೆ ಸಚಿವ ಪಿಯೂಷ್ ಗೊಯಲ್ ಹಂಗಾಮಿ ವಿತ್ತ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಅರುಣ್ ಜೇಟ್ಲಿ 2000ದಿಂದಲೂ ರಾಜ್ಯಸಭೆಯ ಸದಸ್ಯರಾಗಿದ್ದಾರೆ.  ಮಾರ್ಚ್ ತಿಂಗಳಲ್ಲಿ ಉತ್ತರ ಪ್ರದೇಶದಿಂದ ರಾಜ್ಯಸಭೆಗೆ  ಆಯ್ಕೆಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT