ಅರುಣ್ ಜೇಟ್ಲಿ 
ದೇಶ

ನಾಳೆ ರಾಜ್ಯಸಭೆ ಉಪಸಭಾಪತಿ ಚುನಾವಣೆ : ಅರುಣ್ ಜೇಟ್ಲಿ ಪಾಲ್ಗೊಳ್ಳುವ ಸಾಧ್ಯತೆ

ನಾಳೆ ರಾಜ್ಯಸಭೆಯ ಉಪಸಭಾಪತಿ ಚುನಾವಣೆ ನಡೆಯಲಿದ್ದು, ವಿತ್ತ ಸಚಿವ ಅರುಣ್ ಜೇಟ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

 ನವದೆಹಲಿ: ನಾಳೆ ರಾಜ್ಯಸಭೆಯ ಉಪಸಭಾಪತಿ ಚುನಾವಣೆ ನಡೆಯಲಿದ್ದು, ವಿತ್ತ ಸಚಿವ ಅರುಣ್ ಜೇಟ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

 ರಾಜ್ಯಸಭೆಯ  ನಾಯಕರಾಗಿರುವ ಅರುಣ್ ಜೇಟ್ಲಿ ಮೇ ತಿಂಗಳಲ್ಲಿ  ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಹಿನ್ನೆಲೆಯಲ್ಲಿ ಅಂದಿನಿಂದ   ಸಂಸತ್ ಕಲಾಪದಲ್ಲಿ ಪಾಲ್ಗೊಂಡಿರಲಿಲ್ಲ. ನಾಳೆ  ಮೊದಲ ಬಾರಿಗೆ  ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಉಪಸಭಾಪತಿ ಚುನಾವಣೆಯಲ್ಲಿ ಅರುಣ್ ಜೇಟ್ಲಿ ಪಾಲ್ಗೊಳ್ಳಲಿದ್ದು, ಮತ ಚಲಾಯಿಸಲಿದ್ದಾರೆ ಎಂಬಂತಹ ಮಾಹಿತಿಗಳು ತಿಳಿದುಬಂದಿದೆ.

65 ವರ್ಷದ ಅರುಣ್ ಜೇಟ್ಲಿ ಏಪ್ರಿಲ್  1 ರಿಂದಲೇ ಕಚೇರಿಗೆ ಬರುತ್ತಿರಲಿಲ್ಲ. ಮೇ 14 ರಂದು ಅವರಿಗೆ  ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಯಾಗಿತ್ತು.  ನಂತರ ರೈಲ್ವೆ ಸಚಿವ ಪಿಯೂಷ್ ಗೊಯಲ್ ಹಂಗಾಮಿ ವಿತ್ತ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಅರುಣ್ ಜೇಟ್ಲಿ 2000ದಿಂದಲೂ ರಾಜ್ಯಸಭೆಯ ಸದಸ್ಯರಾಗಿದ್ದಾರೆ.  ಮಾರ್ಚ್ ತಿಂಗಳಲ್ಲಿ ಉತ್ತರ ಪ್ರದೇಶದಿಂದ ರಾಜ್ಯಸಭೆಗೆ  ಆಯ್ಕೆಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT