ಕರುಣಾನಿಧಿ ನಿಧನ: ಅಂತಿಮ ವಿದಾಯಕ್ಕೆ ಸಕಲ ಸಿದ್ಧತೆ, ತಮಿಳುನಾಡಿನಲ್ಲಿ ಮುಗಿಲು ಮುಟ್ಟಿದ ಆಕ್ರಂದನ 
ದೇಶ

ಕರುಣಾನಿಧಿ ನಿಧನ: ಅಂತಿಮ ವಿದಾಯಕ್ಕೆ ಸಕಲ ಸಿದ್ಧತೆ, ತಮಿಳುನಾಡಿನಲ್ಲಿ ಮುಗಿಲು ಮುಟ್ಟಿದ ಆಕ್ರಂದನ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಮುತ್ತುವೇಲ್ ಕರುಣಾನಿಧಿ ಅವರ ಅಗಲಿಕೆಯಿಂದಾಗಿ ಇಡೀ ತಮಿಳುನಾಡು ಶೋಕಸಾಗರದಲ್ಲಿ ಮುಳುಗಿದ್ದು, ದ್ರಾವಿಡ ಮೇರು ನಾಯಕನಿಗೆ ಅಂತಿಮ ವಿದಾಯ ಹೇಳಲು...

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಮುತ್ತುವೇಲ್ ಕರುಣಾನಿಧಿ ಅವರ ಅಗಲಿಕೆಯಿಂದಾಗಿ ಇಡೀ ತಮಿಳುನಾಡು ಶೋಕಸಾಗರದಲ್ಲಿ ಮುಳುಗಿದ್ದು, ದ್ರಾವಿಡ ಮೇರು ನಾಯಕನಿಗೆ ಅಂತಿಮ ವಿದಾಯ ಹೇಳಲು ಮರೀನಾ ಬೀಚ್ ಬಳಿ ಸಕಲ ಸಿದ್ಧತೆಗಳು ನಡೆಯುತ್ತಿವೆ. 
ಪ್ರಸ್ತುತ ಕರುಣಾನಿಧಿಯವರ ಪಾರ್ಥೀವ ಶರೀರವನ್ನು ಚೆನ್ನೈನ ರಾಜಾಜಿ ಹಾಲ್ ನಲ್ಲಿ ಇರಿಸಲಾಗಿದ್ದು, ಸಾರ್ವಜನಿಕರ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಸಾರ್ವಜನಿಕರ ದರ್ಶನದ ಬಳಿಕ ಸಂಜೆ 4 ಗಂಟೆ ಸುಮಾರಿಗೆ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 
ಕರುಣಾನಿಧಿಯವರ ಅಂತ್ಯಕ್ರಿಯೆಗೆ ಸ್ಥಳ ನಿಗದಿಯಾಗುತ್ತಿದ್ದಂತೆಯೇ ಮರೀನಾ ಬೀಚ್ ನತ್ತ ಜನ ಸಾಗರವೇ ಹರಿದು ಬರುತ್ತಿದೆ. ಅಂತ್ಯಕ್ರಿಯೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಈಗಾಗಲೇ ಮರೀನಾ ಬೀಚ್'ಗೆ ಜೆಸಿಬಿ ಯಂತ್ರಗಳು ಕಾರ್ಯನಿರ್ವಹಿಸುತ್ತಿವೆ. 
ಈ ನಡುವೆ ಬ್ಯಾರಿಕೇಡ್ ಮುರಿದು ನುಗ್ಗಲು ಪ್ರಯತ್ನಿಸಿದ ಅಭಿಮಾನಿಗಳನ್ನು ತಡೆಯಲು ಪೊಲೀಸರು ರಾಜಾಜಿ ಹಾಲ್ ಬಳಿ ಲಘು ಲಾಠಿ ಪ್ರಹಾರ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ. 
11 ದಿನಗಳಿಂದ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕರುಣಾನಿಧಿಯವರು ನಿನ್ನೆ ಸಂಜೆ 6.10ರ ಸುಮಾರಿಗೆ ಕೊನೆಯುಸಿರೆಳೆದಿದ್ದರು. ಕರುಣಾನಿಧಿಯವರ ಅಗಲಿಕೆ ಅಸಂಖ್ಯಾತ ಡಿಎಂಕೆ ಕಾರ್ಯಕರ್ತರನ್ನು ಶೋಕಸಾಗರದಲ್ಲಿ ದೂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT