ತಮಿಳುನಾಡು ಸರ್ಕಾರಕ್ಕೆ ಮುಖಭಂಗ: ಮರೀನಾ ಬೀಚ್'ನಲ್ಲೇ ಕರುಣಾನಿಧಿ ಅಂತ್ಯಕ್ರಿಯೆಗೆ 'ಹೈ' ಅಸ್ತು 
ದೇಶ

ತಮಿಳುನಾಡು ಸರ್ಕಾರಕ್ಕೆ ಮುಖಭಂಗ: ಮರೀನಾ ಬೀಚ್'ನಲ್ಲೇ ಕರುಣಾನಿಧಿ ಅಂತ್ಯಕ್ರಿಯೆಗೆ 'ಹೈ' ಅಸ್ತು

ಭಾರಿ ಹೈಡ್ರಾಮಾಕ್ಕೆ ಡಿಎಂಕೆ ಸರ್ವೋಚ್ಚ ನಾಯಕ ಎಂ.ಕರುಣಾನಿಧಿಯವರ ಅಂತ್ಯಕ್ರಿಯೆ ಎಲ್ಲಿ ನಡೆಸಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರಕ್ಕೆ ಮುಖಭಂಗವಾಗಿದ್ದು,...

ಚೆನ್ನೈ: ಭಾರಿ ಹೈಡ್ರಾಮಾಕ್ಕೆ ಡಿಎಂಕೆ ಸರ್ವೋಚ್ಚ ನಾಯಕ ಎಂ.ಕರುಣಾನಿಧಿಯವರ ಅಂತ್ಯಕ್ರಿಯೆ ಎಲ್ಲಿ ನಡೆಸಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರಕ್ಕೆ ಮುಖಭಂಗವಾಗಿದ್ದು, ಮರೀನಾ ಬೀಚ್ ನಲ್ಲಿಯೇ ಕರುಣಾನಿಧಿ ಅಂತ್ಯಕ್ರಿಯೆಗೆ ಮದ್ರಾಸ್ ಹೈ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. 
ಅಣ್ಣಾದೊರೈ, ಎಂಜಿಆರ್ ಹಾಗೂ ಜಯಲಲಿತಾ ಸಮಾಧಿಗಳು ಇರುವ ರಾಜಧಾನಿ ಚೆನ್ನೈನ ಮರೀನಾ ಬೀಚ್ ನಲ್ಲಿ ಅಣ್ಣಾದೊರೈ ಸ್ಮಾರಕದ ಪಕ್ಕದಲ್ಲಿಯೇ ಕರುಣಾನಿಧಿಯವರನ್ನು ಮಣ್ಣು ಮಾಡಬೇಕೆಂದು ಡಿಎಂಕೆ ಪಟ್ಟು ಹಿಡಿದಿತ್ತು. ಆದರೆ, ಮಾಜಿ ಮುಖ್ಯಮಂತ್ರಿ ಎಂಬ ಕಾರಣಕ್ಕೆ ಹಾಗೂ ಕಾನೂನು ತೊಡಕು ಮುಂದೊಡ್ಡಿ ಮುಖ್ಯಮಂತ್ರಿ ಇ. ಪಳನಿಸ್ವಾಮಿಯವರು ಇದನ್ನು ನಿರಾಕರಿಸಿದ್ದರು. 
ಇದರ ಬೆನ್ನಲ್ಲೇ ಡಿಎಂಕೆ ಕಾರ್ಯಕರ್ತರು ಹಿಂಸಾಚಾರ ನಡೆಸಿದರೆ ಎಂಬ ಕಾರಣಕ್ಕೆ ಕಾನೂನು ವಿಭಾಗ ರಾತ್ರೋರಾತ್ರಿ ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದು, ಹೈಕೋರ್ಟ್'ನ ಹಂಗಾಮಿ ನ್ಯಾಯಮೂರ್ತಿ, ಕನ್ನಡಿಗ ಹುಲುವಾಡಿ ಜಿ.ರಮೇಶ್ ಅವರು ಈ ಅರ್ಜಿಯನ್ನು ರಾತ್ರಿಯೇ ವಿಚಾರಣೆ ನಡೆಸಲು ಒಪ್ಪಿಗೆ ನೀಡಿದ್ದರು. 
ಇದರಂತೆ ಇಂದು ಬೆಳಿಗ್ಗೆ ನಡೆದ ವಿಚಾರಣೆ ವೇಳೆ ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತ್ಯಕ್ರಿಯೆಗೆ ವಿರೋಧ ವ್ಯಕ್ತಪಡಿಸಿ ಸಲ್ಲಿಕೆಯಾಗಿದ್ದ 5 ಅರ್ಜಿಗಳನ್ನು ತಿರಸ್ಕೃತಗೊಂಡಿದ್ದವು. ಬಳಿಕ ತಮಿಳುನಾಡು ಸರ್ಕಾರ ಹಾಗೂ ಡಿಎಂಕೆ ಪರ ವಕೀಲರ ನಡುವೆ ವಾದ ವಿವಾದಗಳನ್ನು ಆಲಿಸಿದ ಮದ್ರಾಸ್ ಹೈಕೋರ್ಟ್ ದ್ವಿಸದಸ್ಯ ಪೀಠ ಇದೀಗ ತೀರ್ಪು ಪ್ರಕಟಿಸಿದ್ದು, ಮರೀನಾ ಬೀಚ್ ನಲ್ಲಿಯೇ ಕರುಣಾನಿಧಿ ಅಂತ್ಯಕ್ರಿಯೆಗೆ ಅವಕಾಶ ಮಾಡಿಕೊಟ್ಟಿದೆ. ನ್ಯಾಯಾಲಯದ ಆದೇಶ ಹಿನ್ನಲೆಯಲ್ಲಿ ಅಣ್ಣಾದೊರೈ ಸಮಾಧಿ ಪಕ್ಕದಲ್ಲಿಯೇ ಕರುಣಾನಿಧಿ ಅಂತ್ಯಕ್ರಿಯೆ ನಡೆಯಲಿದೆ. 
ನ್ಯಾಯಾಲಯದ ತೀರ್ಪು ಹೊರಬೀಲುತ್ತಿದ್ದಂತೆಯೇ ಕರುಣಾನಿಧಿ ಪಾರ್ಥೀವ ಶರೀರದ ಬಳಿಯಿದ್ದ ಸ್ಟಾಲಿನ್, ಅಳಗಿರಿ, ಕನಿಮೋಳಿ ಹಾಗೂ ದಯಾನಿಧಿ ಮಾರನ್ ಅವರು ಕಣ್ಣೀರಿಟ್ಟರು. ಈ ನಡುವೆ ನ್ಯಾಯಾಲಯದ ತೀರ್ಪಿನಿಂದ ಡಿಎಂಕೆ ಕಾರ್ಯಕರ್ತರು ಕೂಡ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ