ದೇಶ

ಕರುಣಾನಿಧಿಗೆ ಅಂತಿಮ ಗೌರವ ಸಲ್ಲಿಸಿದ ಮಮತಾ, ರಜನಿಕಾಂತ್

Nagaraja AB

ಚನ್ನೈ : ಡಿಎಂಕೆ ವರಿಷ್ಠ , ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಪಾರ್ಥಿವ ಶರೀರವನ್ನು ಗೋಪಾಲಪುರಂನಲ್ಲಿನ ಅವರ ನಿವಾಸದ ಎದುರು ಕುಟುಂಬ ಸದಸ್ಯರು ಹಾಗೂ ಬಂಧುಗಳ ಅಂತಿಮ ದರ್ಶನಕ್ಕೆ ಇಡಲಾಗಿದೆ.

ಗೋಪಾಲಪುರಂ ನಿವಾಸಕ್ಕೆ ಆಗಮಿಸುತ್ತಿರುವ ಕುಟುಂಬ ಸದಸ್ಯರು ಹಾಗೂ ಬಂಧುಗಳು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಅನೇಕ ರಾಜಕೀಯ ಗಣ್ಯರು ಭೇಟಿ ನೀಡುತ್ತಿದ್ದು, ಕರುಣಾನಿಧಿ ಅವರ  ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ಆಗಮಿಸಿ  ಕರುಣಾನಿಧಿಗೆ ಅಂತಿಮ ಗೌರವ ಸಲ್ಲಿಸಿದರು.

ಕರುಣಾನಿಧಿ ಅವರ ಪುತ್ರ  ಹಾಗೂ ಡಿಎಂಕೆ ಕಾರ್ಯಾಧ್ಯಕ್ಷ ಎಂ. ಕೆ. ಸ್ಟಾಲಿನ್ ಹಾಗೂ ಕರುಣಾನಿಧಿ ಅವರ ಪುತ್ರಿ ಕನ್ನಿಮೋಳಿ ಅವರಿಗೆ  ಮಮತಾ ಬ್ಯಾನರ್ಜಿ ಸಾಂತ್ವನ ಹೇಳಿದರು.
SCROLL FOR NEXT