ರಾಹುಲ್ ಗಾಂಧಿ 
ದೇಶ

ನ್ಯಾಷನಲ್ ಹೆರಾಲ್ಡ್ ಕೇಸು; ರಾಹುಲ್ ಗಾಂಧಿಗೆ ಮಧ್ಯಂತರ ಜಾಮೀನು ನಿರಾಕರಣೆ

ಕಳೆದ ಮಾರ್ಚ್ ತಿಂಗಳಲ್ಲಿ ಆದಾಯ ತೆರಿಗೆ ಇಲಾಖೆ ಹೊರಡಿಸಿದ್ದ ಆದಾಯ ತೆರಿಗೆ ಮರು ...

ನವದೆಹಲಿ: ಕಳೆದ ಮಾರ್ಚ್ ತಿಂಗಳಲ್ಲಿ ಆದಾಯ ತೆರಿಗೆ ಇಲಾಖೆ ಹೊರಡಿಸಿದ್ದ ಆದಾಯ ತೆರಿಗೆ ಮರು ಮೌಲ್ಯಮಾಪನ ನೊಟೀಸ್ ಗೆ ಸಂಬಂಧಪಟ್ಟಂತೆ ದೆಹಲಿ ಹೈಕೋರ್ಟ್ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ.

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿಯವರು ಭಾಗಿಯಾಗಿದ್ದಾರೆ ಎನ್ನಲಾಗುತ್ತಿರುವ ನ್ಯಾಷನಲ್ ಹೆರಾಲ್ಡ್ ಕೇಸಿಗೆ ಸಂಬಂಧಪಟ್ಟಂತೆ ಕೂಡ ಮಾಧ್ಯಮ ವರದಿಗಳಿಗೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ.

ನ್ಯಾಶನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಪತ್ರಿಕೆಗಳ ಹಣಕಾಸಿನ ವಹಿವಾಟಿಗೆ ಸಂಬಂಧಪಟ್ಟಂತೆ ತೆರಿಗೆ ಮೌಲ್ಯಮಾಪನವನ್ನು ಮತ್ತೆ ಮಾಡುವಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಆದೇಶವನ್ನು ಪ್ರಶ್ನಿಸಿ ದೆಹಲಿ ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಅರ್ಜಿ ಸಲ್ಲಿಸಿದ್ದರು. ದೆಹಲಿ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಆಗಸ್ಟ್ 14ಕ್ಕೆ ಮುಂದೂಡಿದೆ.

ಕಳೆದ ಮಾರ್ಚ್ ನಲ್ಲಿ 2011-12ನೇ ಆರ್ಥಿಕ ಸಾಲಿನ ಆದಾಯ ತೆರಿಗೆ ಮರುಮೌಲ್ಯಮಾಪನಕ್ಕೆ ಸಂಬಂಧಪಟ್ಟಂತೆ ರಾಹುಲ್ ಗಾಂಧಿಗೆ ನೊಟೀಸ್ ಜಾರಿ ಮಾಡಲಾಗಿತ್ತು. ಯಂಗ್ ಇಂಡಿಯಾದ ನಿರ್ದೇಶಕರ ಹೆಸರನ್ನು ರಾಹುಲ್ ಗಾಂಧಿ ಬಹಿರಂಗಪಡಿಸಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಆರೋಪಿಸಿತ್ತು.

ಎಐಸಿಸಿ ಕಡೆಯಿಂದ ಅಸೋಸಿಯೇಟ್ ಜರ್ನಲ್ ಲಿಮಿಟೆಡ್ ಗೆ 99 ಕೋಟಿ ರೂಪಾಯಿ ಸಂದಾಯವಾಗಿದ್ದು, ರಾಹುಲ್ ಗಾಂಧಿಯವರೇ ಯಂಗ್ ಇಂಡಿಯಾ ನಿರ್ದೇಶಕರಾಗಿರುವುದರಿಂದ ಉದ್ದೇಶಪೂರ್ವಕವಾಗಿ ಅವರು ಹೆಸರು ಬಹಿರಂಗಪಡಿಸಿಲ್ಲ ಎನ್ನುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'Gaza deal ಒಪ್ಕೊಳ್ಳಿ.. ಇಲ್ಲ ನರಕ ತೋರಿಸ್ತೀವಿ': Hamas ಗೆ ಡೊನಾಲ್ಡ್ ಟ್ರಂಪ್ ಅಂತಿಮ ಎಚ್ಚರಿಕೆ!

ಕರೂರ್ ಕಾಲ್ತುಳಿತ ತನಿಖೆಗೆ SIT ರಚನೆ: ಸ್ಥಳದಿಂದ ಓಡಿ ಹೋದ ವಿಜಯ್​​ಗೆ ಮದ್ರಾಸ್ ಹೈಕೋರ್ಟ್ ತರಾಟೆ

ಖ್ಯಾತ ಹಿರಿಯ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

'ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕುತ್ತೇವೆ': ಬಾಲ ಬಿಚ್ಚಿದ ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥ ದ್ವಿವೇದಿ ಎಚ್ಚರಿಕೆ! Video

1st Test: ವಿಂಡೀಸ್ ವಿರುದ್ಧ ಶತಕ ಸಿಡಿಸಿ ಆಯ್ಕೆದಾರರಿಗೆ Dhruv Jurel ಸಂದೇಶ, ರಿಷಬ್ ಪಂತ್ ಗೆ ಸಂಕಷ್ಟ?

SCROLL FOR NEXT