ಲೋಕಸಭೆ 
ದೇಶ

ಕರುಣಾನಿಧಿಗೆ ಗೌರವ ಸಲ್ಲಿಸಿ ಸಂಸತ್ ಕಲಾಪ ಮುಂದೂಡಿಕೆ, ಲೋಕಸಭೆ ಇತಿಹಾಸದಲ್ಲೇ ಮೊದಲು!

ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಮುತ್ತುವೇಲ್ ಕರುಣಾನಿಧಿ ಅವರ ನಿಧನಕ್ಕೆ ಸಂತಾಪ ಸೂಚಿಸಿ ...

ನವದೆಹಲಿ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಮುತ್ತುವೇಲ್ ಕರುಣಾನಿಧಿ ಅವರ ನಿಧನಕ್ಕೆ ಸಂತಾಪ ಸೂಚಿಸಿ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪವನ್ನು ಬುಧವಾರ ಮುಂದೂಡಲಾಗಿದೆ.
ಯಾವತ್ತೂ ಸಂಸದರಾಗಿರದ ವ್ಯಕ್ತಿಯೊಬ್ಬರಿಗೆ ಸಂತಾಪ ಸೂಚಿಸಿ ಕಲಾಪವನ್ನು ಮುಂದೂಡಿರುವುದು ಲೋಕಸಭೆ ಇತಿಹಾಸದಲ್ಲಿ ಇದೇ ಮೊದಲು ಎಂದು ವರದಿಯಾಗಿದೆ.
ಐದು ಬಾರಿ ತಮಿಳುನಾಡು ಮುಖ್ಯಮಂತ್ರಿಯಾಗಿರುವ ಕರುಣಾನಿಧಿ ಅವರು 13 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ ಅವರು ಯಾವತ್ತೂ ಸಂಸದರಾಗಿ ಆಯ್ಕೆಯಾಗಿರಲಿಲ್ಲ. ಅಲ್ಲದೆ 50 ವರ್ಷಗಳ ಕಾಲ ಪ್ರಾದೇಶಿಕ ಪಕ್ಷ ಡಿಎಂಕೆ ಚುಕ್ಕಾಣಿಯನ್ನು ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ಸಂಸದರಾಗದೇ ಇದ್ದ ಮಾಜಿ ಸಿಎಂಗೆ ಗೌರವ ಸಲ್ಲಿಸಿ ಸಂಸತ್ ಕಲಾಪ ಮುಂದೂಡಲಾಗಿದೆ.
ಇಂದು ಬೆಳಗ್ಗೆ ಸಂಸತ್ ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು, ಕರುಣಾನಿಧಿ ಅವರು ಒಬ್ಬ ದಾರ್ಶನಿಕ ಮತ್ತು ಜನಸಾಮಾನ್ಯರ ನಾಯಕ ಎಂದು ಬಣ್ಣಿಸುವ ಮೂಲಕ ಗೌರವ ಸಲ್ಲಿಸಿದರು.
ಮೌನಾಚರಣೆ ಆಚರಿಸಿದ ಬಳಿಕ ಸ್ಪೀಕರ್ ಕಲಾಪವನ್ನು ನಾಳೆಗೆ ಮುಂದೂಡಿದರು.
ಇನ್ನು ರಾಜ್ಯಸಭೆಯಲ್ಲೂ ಸಹ ಸಭಾಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರು, ಕರುಣಾನಿಧಿ ಅವರದ್ದು ಬಹುಮುಖಿ ವ್ಯಕ್ತಿತ್ವ ಮತ್ತು ಸಂಕಷ್ಟಗಳನ್ನು ಮೀರಿ ಬೆಳೆದ ವ್ಯಕ್ತಿಯಾಗಿದ್ದರು ಎಂದು ವರ್ಣಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸೇನೆ ಸಹ ಮೇಲ್ಜಾತಿಯವರಿಂದ ನಿಯಂತ್ರಿಸಲ್ಪಡುತ್ತದೆ': ರಾಹುಲ್ ಗಾಂಧಿಯಿಂದ ಹೊಸ ವಿವಾದ

ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ತಡೆಯಾಜ್ಞೆ ವಿರೋಧಿಸಿ ಸರ್ಕಾರದ ಮೇಲ್ಮನವಿ, 'ಆದೇಶ ಕಾಯ್ದಿರಿಸಿದ' ಹೈಕೋರ್ಟ್

ಕೊನೆಗೆ ನಿಮಗೆ 'ಚಹಾ ಕಪ್' ಗತಿ: ವಿಶ್ವಕಪ್ ಗೆದ್ದ ನಂತರ Pakistan ಕಾಲೆಳೆದು ಸೇಡು ತೀರಿಸಿಕೊಂಡ ಹರ್ಮನ್‌ಪ್ರೀತ್ ಕೌರ್; Video ವೈರಲ್!

ರಾಮನಗರ: ಕೋಟ್ಯಂತರ ರೂ. ವೆಚ್ಚದಲ್ಲಿ 'ಹಿಂದೂ ದೇವಾಲಯ' ಕಟ್ಟಿಸಿಕೊಟ್ಟ ಮುಸ್ಲಿಂ ಉದ್ಯಮಿ!

ಅಸ್ಸಾಂ: ಶಾಲೆಯಿಂದ ಹಿಂತಿರುಗುತ್ತಿದ್ದ 7ನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ!

SCROLL FOR NEXT