ಉಪ ಸಭಾಪತಿಯಾಗಿ ಆಯ್ಕೆಗೊಂಡ ನಂತರ ಹರಿವಂಶ ನಾರಾಯಣ್ ಸಿಂಗ್ 
ದೇಶ

ರಾಜ್ಯಸಭೆ ಉಪ ಸಭಾಪತಿ ಹರಿವಂಶ ನಾರಾಯಣ್ ಸಿಂಗ್ ಬಗ್ಗೆ ಕಿರು ಮಾಹಿತಿ

ರಾಜ್ಯಸಭೆಯ ಉಪ ಸಭಾಪತಿಯಾಗಿ ಗುರುವಾರ ಆಯ್ಕೆಯಾಗಿರುವ ಎನ್ ಡಿಎ ಅಭ್ಯರ್ಥಿ ಮತ್ತು ಜೆಡಿಯು...

ರಾಜ್ಯಸಭೆಯ ಉಪ ಸಭಾಪತಿಯಾಗಿ ಗುರುವಾರ ಆಯ್ಕೆಯಾಗಿರುವ ಎನ್ ಡಿಎ ಅಭ್ಯರ್ಥಿ ಮತ್ತು ಜೆಡಿಯು ಸಂಸದ ಹರಿವಂಶ ನಾರಾಯಣ್ ಸಿಂಗ್ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಬಿ ಕೆ ಹರಿಪ್ರಸಾದ್ ಅವರನ್ನು 20 ಮತಗಳ ಅಂತರದಿಂದ ಸೋಲಿಸಿದ್ದಾರೆ. ಹರಿವಂಶ ನಾರಾಯಣ್ ಸಿಂಗ್ 125 ಮತಗಳನ್ನು ಗಳಿಸಿದರೆ ಬಿ ಕೆ ಹರಿಪ್ರಸಾದ್ ಅವರಿಗೆ 105 ಮತಗಳು ಲಭಿಸಿವೆ.

ಹಾಗಾದರೆ ಹರಿವಂಶ ಸಿಂಗ್ ಯಾರು, ಅವರ ಹಿನ್ನಲೆಯೇನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ:
-ಬಿಹಾರದ ಸರನ್ ಜಿಲ್ಲೆಯ ಸಿತಾಬ್ ದಿಯಾರಾ ಗ್ರಾಮದಿಂದ ಬಂದವರು ಹರಿವಂಶ ನಾರಾಯಣ್ ಸಿಂಗ್. ಇವರು ಜನಿಸಿದ್ದು ಜೂನ್ 30, 1956.

-ಕಾಲೇಜು ದಿನಗಳಿಂದ ಬಹಳ ವರ್ಷಗಳವರೆಗೆ ಸಮಾಜ ಸುಧಾರಕರಾಗಿ ಮತ್ತು ಜಯಪ್ರಕಾಶ್ ನಾರಾಯಣ್ ಅವರೊಂದಿಗೆ ಗುರುತಿಸಿಕೊಂಡಿದ್ದರು. 1974ರಲ್ಲಿ ಜೆಪಿ ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.

-ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದರು. 1980ರ ದಶಕದಲ್ಲಿ ಧರ್ಮಯುಗ್ ಎಂಬ ಹಿಂದಿ ವಾರಪತ್ರಿಕೆಯಲ್ಲಿ ಪತ್ರಿಕೋದ್ಯಮ ವೃತ್ತಿ ಆರಂಭಿಸಿದರು.

-ನಂತರ 1989ರಲ್ಲಿ ರಾಂಚಿಯಲ್ಲಿ ಹಿಂದಿ ದಿನಪತ್ರಿಕೆ ಪ್ರಭಾತ್ ಕಬರ್ ಎಂಬ ಪತ್ರಿಕೆಗೆ ಸೇರಿ ಅದರಲ್ಲಿ ಬಡ್ತಿ ಪಡೆದು ಮುಖ್ಯ ಸಂಪಾದಕರಾದರು.

2014ರಲ್ಲಿ ರಾಜ್ಯಸಭೆಯಲ್ಲಿ ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾ ದಳ ಮೂಲಕ ರಾಜ್ಯಸಭಾ ಸದಸ್ಯರಾದರು. ಅದರ ಅಧಿಕಾರಾವಧಿ 2020ಕ್ಕೆ ಮುಗಿಯಲಿದೆ.

ರಾಜ್ಯಸಭೆಗೆ ಆಯ್ಕೆಯಾಗುವ ಮುನ್ನ 1990ರಲ್ಲಿ ಮಾಜಿ ಪ್ರಧಾನಿ ಚಂದ್ರಶೇಖರ್ ಅವರಿಗೆ ಮಾಧ್ಯಮ ಸಲಹೆಗಾರರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT