ದೇಶ

ರಾಜ್ಯಸಭೆ ಉಪಸಭಾಪತಿಯಾಗಿ ಹರಿವಂಶ್ ಸಿಂಗ್ ಆಯ್ಕೆ: ಶುಭಾಶಯ ಕೋರಿದ ಪ್ರಧಾನಿ ಮೋದಿ

Manjula VN
ನವದೆಹಲಿ: ರಾಜ್ಯಸಭೆ ಉಪಸಭಾಪತಿಯಾಗಿ ಎನ್'ಡಿಎ ಅಭ್ಯರ್ಥಿ ಹರಿವಂಶ್ ಸಿಂಗ್ ಅವರು ಭರ್ಜರಿ ಗೆಲವು ಸಾಧಿಸಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಶುಭಾಶಯಗಳನ್ನು ತಿಳಿಸಿದ್ದಾರೆ. 
ಪಿ.ಜೆ ಕುರಿಯನ್ ಅವರ ನಿವೃತ್ತಿ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ನಡೆದ ಮತದಾನದಲ್ಲಿ ಹರಿವಂಶ್ ನಾರಾಯಣ್ ಸಿಂಗ್ ಅವರು ಗೆಲವು ಸಾಧಿಸಿದ್ದಾರೆ. ಒಟ್ಟು ಮತಗಳ ಪೈಕಿ ಹರಿವಂಶ ಅವರು 125 ಮತಗಳನ್ನು ಪಡೆಯುವ ಮೂಲಕ ಗೆಲವು ಸಾಧಿಸಿದ್ದಾರೆ. 
ಈ ಹಿನ್ನಲೆಯಲ್ಲಿ ಮಾತನಾಡಿರುವ ಪ್ರಧಾನಿ ಮೋದಿಯವರು, ಇಡೀ ಸದನದ ಪರವಾಗಿ ಹರಿವಂಶ ಜೀ ಅವರಿಗೆ ಶುಭಾಶಯಗಳನ್ನು ಕೋರುತ್ತಿದ್ದೇನೆ. ಹರಿವಂಶ ಅವರು ಬರವಣಿಗೆ ಪ್ರತಿಭೆಯ ಮೂಲಕ ಆಶೀರ್ವಾದ ಪಡೆದುಕೊಂಡಿದ್ದಾರೆ. ಅಲ್ಲದೆ, ಮಾಜಿ ಪ್ರಧಾನಮಂತ್ರಿ ಚಂದ್ರ ಶೇಖರ್ ಜೀ ಅವರಿಗೆ ನೆಚ್ಚಿನ ವ್ಯಕ್ತಿಯಾಗಿದ್ದಾರೆಂದು ಹೇಳಿದ್ದಾರೆ. 
SCROLL FOR NEXT