ಕಣ್ಸನ್ನೆ, ಸಂಸತ್ ಕಲಾಪಕ್ಕೆ ಅಡ್ಡಿಪಡಿಸುವುದರಿಂದ ಬಿಡುವಾದಾಗ ವಾಸ್ತವಾಂಶಗಳನ್ನು ಓದಿ: ರಾಹುಲ್ ಗೆ ಅಮಿತ್ ಶಾ 
ದೇಶ

ಕಣ್ಸನ್ನೆ, ಕಲಾಪಕ್ಕೆ ಅಡ್ಡಿ ಮಾಡುವ ಕೆಲಸಗಳಿಂದ ಬಿಡುವು ಸಿಕ್ಕಾಗ ವಾಸ್ತವಾಂಶ ಓದಿ: ರಾಹುಲ್ ಗೆ ಅಮಿತ್ ಶಾ

ಎಸ್ ಸಿ/ಎಸ್ ಟಿ ದೌರ್ಜನ್ಯ ಕಾಯ್ದೆ ವಿಷಯವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ವಾಸ್ತವಾಂಶ

ನವದೆಹಲಿ: ಎಸ್ ಸಿ/ಎಸ್ ಟಿ ದೌರ್ಜನ್ಯ ಕಾಯ್ದೆ ವಿಷಯವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ವಾಸ್ತವಾಂಶ ತಿಳಿದುಕೊಳ್ಳುವಂತೆ ಸಲಹೆ ನೀಡಿದ್ದಾರೆ. 
ರಾಹುಲ್ ಗಾಂಧಿ ಸಂಸತ್ ನಲ್ಲಿ ಕಣ್ಸನ್ನೆ ಮಾಡಿದ್ದನ್ನು ನೆನಪಿಸಿಕೊಂಡಿರುವ ಅಮಿತ್ ಶಾ, ಕಣ್ಸನ್ನೆ, ಸಂಸತ್ ಕಲಾಪಕ್ಕೆ ಅಡ್ಡಿಪಡಿಸುವುದರಿಂದ ಬಿಡುವು ಸಿಕ್ಕಾಗ ವಾಸ್ತವಾಂಶಗಳನ್ನು ತಿಳಿದುಕೊಳ್ಳಲು ಸಮಯ ವ್ಯಯಿಸಿ ಎಂದು ಹೇಳಿದ್ದಾರೆ. ಎನ್ ಡಿಎ ಸರ್ಕಾರದ ಸಚಿವ ಸಂಪುಟ  ಎಸ್ ಸಿ/ಎಸ್ ಟಿ ದೌರ್ಜನ್ಯ ಕಾಯ್ದೆಯ ಮೂಲ ನಿಬಂಧನೆಗಳನ್ನು ಮತ್ತೆ ಜಾರಿಗೆ ತರಲು ಕ್ರಮ ಕೈಗೊಂಡಿದೆ, ಅದನ್ಯಾಕೆ ಪ್ರತಿಭಟಿಸುತ್ತಿದ್ದೀರಾ?  ಕಣ್ಸನ್ನೆ ಮಾಡುವುದು, ಸಂಸತ್ ಕಲಾಪಕ್ಕೆ ಅಡ್ಡಿಪಡಿಸುವುದರಿಂದ ಬಿಡುವು ಮಾಡಿಕೊಂಡು ವಾಸ್ತವಾಂಶಗಳನ್ನು ತಿಳಿದುಕೊಳ್ಳುವುದಕ್ಕೆ ಸ್ವಲ್ಪ ಸಮಯ ನೀಡಿ ರಾಹುಲ್ ಗಾಂಧಿ ಎಂದು ಅಮಿತ್ ಶಾ ಹೇಳಿದ್ದಾರೆ. 
ಮಿಸ್ಟರ್ ರಾಹುಲ್ ಗಾಂಧಿ, ಸಂಶೋಧನೆ ಹಾಗೂ ಪ್ರಾಮಾಣಿಕತೆಯನ್ನು ನಿಮ್ಮಿಂದ ನಿರೀಕ್ಷಿಸುವುದು ಕಷ್ಟ ಎಂಬುದು ತಿಳಿದಿದೆ, ಆದರೆ ಮಂಡಲ್ ಆಯೋಗದ ವರದಿಯ ಸಂದರ್ಭದಲ್ಲಿನ ರಾಜೀವ್ ಗಾಂಧಿ ಅವರ ಭಾಷಣವನ್ನು ಓದಿ, ಅದರಲ್ಲಿ ಹಿಂದುಳಿದ ಸಮುದಾಯದ ವಿರುದ್ಧ ಎಷ್ಟು ದ್ವೇಷವಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ, ಆದರೆ ನೀವು ಇಂದು ದಲಿತರ ಸಬಲೀಕರಣ, ಕಲ್ಯಾಣದ ಬಗ್ಗೆ ಮಾತನಾಡುತ್ತಿದ್ದೀರಿ ಎಂದು ರಾಹುಲ್ ಗಾಂಧಿಗೆ ಅಮಿತ್ ಶಾ ತಿರುಗೇಟು ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT