ಎಂ ಕರುಣಾನಿಧಿ 
ದೇಶ

ಕರುಣಾನಿಧಿಗೆ 'ಭಾರತ ರತ್ನ' ನೀಡಿ: ಡಿಎಂಕೆ ಆಗ್ರಹ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ದಿ.ಎಂ.ಕರುಣಾನಿಧಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ...

ನವದೆಹಲಿ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ದಿ.ಎಂ.ಕರುಣಾನಿಧಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಭಾರತ ರತ್ನ' ನೀಡಿ ಗೌರವಿಸುವಂತೆ ಡಿಎಂಕೆ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ.
ಭಾರತ ರತ್ನ ನೀಡಿದರೆ ಮಾತ್ರ ಅತ್ಯುತ್ತಮ ಮತ್ತು ಇತರರಿಗೆ ಮಾದರಿಯಾಗುವಂತಹ ಕೆಲಸ ಮಾಡಿದ ತಮಿಳುನಾಡು ನಾಯಕನಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಡಿಎಂಕೆ ಹೇಳಿದೆ.
ಇಂದು ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಡಿಎಂಕೆ ಸದಸ್ಯ ತಿರುಚಿ ಶಿವ ಅವರು, ಕರುಣಾನಿಧಿ ಅವರು ದೇಶದ ಅತ್ಯುನ್ನತ ನಾಯಕ ಮತ್ತು ದ್ರಾವಿಡರ ಅಗ್ರಮಾನ್ಯ ನಾಯಕ ಎಂದು ಬಣ್ಣಿಸಿದರು.
ಕರುಣಾನಿಧಿ ಅವರು ಬದುಕಿದ್ದ 94 ವರ್ಷಗಳಲ್ಲಿ 80 ವರ್ಷ ಸಾರ್ವಜನಿಕ ಜೀವನದಲ್ಲಿದ್ದು, ದೌರ್ಜನ್ಯಕ್ಕೆ ಒಳಗಾದವರ, ಹಿಂದೂಳಿದವರ ಮತ್ತು ಬಡವರಿಗಾಗಿ ಹೋರಾಡಿದ್ದಾರೆ ಎಂದರು.
ಕರುಣಾನಿಧಿ ಅವರು ಒಬ್ಬ ಅತ್ಯುತ್ತಮ ವಾಗ್ಮಿ, ಉತ್ತಮ ಬರಹಗಾರ, ಕಾದಂಬರಿಕಾರ, ಸಣ್ಣ-ಕಥೆಗಾರ, ತತ್ವಜ್ಞಾನಿ, ಲೋಕೋಪಕಾರಿ ಮತ್ತು ನಾಟಕಕಾರ. ಅಲ್ಲದೆ 80 ಚಿತ್ರಗಳಿಗೆ ಚಿತ್ರಕಥೆ ಬರೆದಿದ್ದರು. ಅವರ ಈ ಎಲ್ಲಾ ಸಾಧನೆ ಮತ್ತು ಸೇವೆಯನ್ನು ಗುರುತಿಸಿ ಅವರಿಗೆ ಭಾರತ ರತ್ನ ನೀಡಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT