ನೀರವ್ ಮೋದಿ 
ದೇಶ

ಆರ್ಥಿಕ ವಂಚನೆ; ನೀರವ್ ಮೋದಿ ಮತ್ತು ಕುಟುಂಬಿಕರಿಗೆ ಸಾರ್ವಜನಿಕ ನೊಟೀಸ್

ತಲೆಮರೆಸಿಕೊಂಡಿರುವ ಆಭರಣ ಉದ್ಯಮಿ ನೀರವ್ ಮೋದಿ ಸೋದರ ಮತ್ತು ಸೋದರಿಗೆ ಮುಂಬೈಯ ...

ನವದೆಹಲಿ: ಭಾರತದಿಂದ ತಲೆಮರೆಸಿಕೊಂಡಿರುವ ಆಭರಣ ಉದ್ಯಮಿ ನೀರವ್ ಮೋದಿ ಸೋದರ ಮತ್ತು ಸೋದರಿಗೆ ಮುಂಬೈಯ ವಿಶೇಷ ದೇಶಭ್ರಷ್ಟ ಆರ್ಥಿಕ ಅಪರಾಧಗಳ ಕಾಯ್ದೆ ನ್ಯಾಯಾಲಯ ಸಾರ್ವಜನಿಕ ಸಮ್ಮನ್ಸ್ ಜಾರಿ ಮಾಡಿದೆ.

ಸುಮಾರು 2 ಶತಕೋಟಿ ಡಾಲರ್ ರೂಪಾಯಿ ಬ್ಯಾಂಕ್ ವಂಚನೆಯ ಕೇಸಿನ ಪ್ರಮುಖ ಆರೋಪಿಯಾಗಿರುವ ನೀರವ್ ಮೋದಿಯ ಒಡಹುಟ್ಟಿದವರಿಗೆ ಸಮ್ಮನ್ಸ್ ಜಾರಿ ಮಾಡಿರುವ ನ್ಯಾಯಾಲಯ ಸೆಪ್ಟೆಂಬರ್ 25ಕ್ಕೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿದೆ.
ಒಂದು ವೇಳೆ ವಿಚಾರಣೆಗೆ ಹಾಜರಾಗುವಲ್ಲಿ ವಿಫಲವಾದರೆ ಅವರ ಆಸ್ತಿಯನ್ನು ಆರ್ಥಿಕ ಅಪರಾಧ ತಡೆಗಟ್ಟುವ ಕಾಯ್ದೆಯಡಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಮುಂಬೈಯ ಅಕ್ರಮ ಹಣ ವರ್ಗಾವಣೆ ಕಾಯ್ದೆ ತಡೆಗಟ್ಟುವ ನ್ಯಾಯಾಲಯ, ಪ್ರಮುಖ ದಿನಪತ್ರಿಕೆಗಳಲ್ಲಿ ಮೂರು ಸಾರ್ವಜನಿಕ ನೊಟೀಸ್ ಗಳನ್ನು ಜಾರಿ ಮಾಡಿದೆ. ಅದರಲ್ಲಿ ನೀರವ್ ಮೋದಿಯವರ ಸೋದರಿ ಪುರ್ವಿ ಮೋದಿ ಮತ್ತು ಸೋದರ ನೀಶಲ್ ಮೋದಿ ಅವರ ಹೆಸರುಗಳನ್ನು ಪ್ರಸ್ತಾಪಿಸಲಾಗಿದೆ. ನೀರವ್ ಮೋದಿಯ ಅಕ್ರಮ ವ್ಯವಹಾರ ಬೆಳಕಿಗೆ ಬರುತ್ತಿದ್ದಂತೆ ಇವರು ಸಹ ದೇಶ ಬಿಟ್ಟು ಹೋಗಿದ್ದಾರೆ ಎಂದು ಹೇಳಲಾಗಿದೆ.

ಸೆಪ್ಟೆಂಬರ್ 25ರಂದು ವಿಚಾರಣೆಗೆ ನೀರವ್ ಮೋದಿಯನ್ನು ಸಹ ದೇಶಭ್ರಷ್ಟ ಆರ್ಥಿಕ ಅಪರಾಧಗಳ ಕಾಯ್ದೆಯಡಿ ವಿಚಾರಣೆಗೆ ಕರೆಯಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT