ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ 
ದೇಶ

ಸ್ವಾತಂತ್ರ್ಯವಿಲ್ಲದ ಜೀವನಕ್ಕೆ ಅರ್ಥವೇ ಇಲ್ಲ: ಸಿಜೆಐ ದೀಪಕ್ ಮಿಶ್ರಾ

ಜೀವನದಲ್ಲಿ ಸ್ವಾತಂತ್ರ್ಯ ಮತ್ತು ಆಧ್ಯಾತ್ಮಿಕತೆಯ ಮಹತ್ವವನ್ನು ಬಲವಾಗಿ ಸಮರ್ಥಿಸಿಕೊಂಡ ಸುಪ್ರೀಂ ಕೋರ್ಟ್ ಮುಖ್ಯ...

ಪುಟ್ಟಪರ್ತಿ: ಜೀವನದಲ್ಲಿ ಸ್ವಾತಂತ್ರ್ಯ ಮತ್ತು ಆಧ್ಯಾತ್ಮಿಕತೆಯ ಮಹತ್ವವನ್ನು ಬಲವಾಗಿ ಸಮರ್ಥಿಸಿಕೊಂಡ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು, ಸ್ವಾತಂತ್ರ್ಯವಿಲ್ಲದೆ ಜೀವನಕ್ಕೆ ಅರ್ಥವೇ ಇಲ್ಲ ಎಂದು ಹೇಳಿದ್ದಾರೆ.
ಪ್ರಶಾಂತಿ ನಿಲಯಂ ಪುಟ್ಟಪರ್ತಿಯಲ್ಲಿ ಆಯೋಜಿಸಿದ್ದ 'ಮಾನವ ಮೌಲ್ಯಗಳು ಮತ್ತು ಕಾನೂನು ಜಗತ್ತು' ಕುರಿತ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ದೀಪಕ್ ಮಿಶ್ರಾ ಅವರು, ಸ್ವಾತಂತ್ರ್ಯವಿಲ್ಲದಯೇ ಮಾನವ ಜನಾಂಗ ಬದುಕಬಲ್ಲದೆ? ಎಂದು ಪ್ರಶ್ನಿಸಿದರು. 
ಜೀವನದಲ್ಲಿ ಆಧ್ಯಾತ್ಮಿಕತೆ ಮತ್ತು ಮಾನವೀಯ ಮೌಲ್ಯಗಳ ಬಗ್ಗೆ ವಿವರಿಸಿದ ಸಿಜೆಐ, ಆಧ್ಯಾತ್ಮವು ತರ್ಕಬದ್ಧವನ್ನು ಮೀರಿದ್ದಾಗಿದೆ. ನನ್ನ ಆಧ್ಯಾತ್ಮಿಕತೆ ಮತ್ತು ನೈತಿಕ ಸಮಾಲೋಚನೆ ನನಗೆ ಇಲ್ಲಿ ಬರುವಂತೆ ಮಾಡಿತು. ವಿಜ್ಞಾನ ಮತ್ತು ಆಧ್ಯಾತ್ಮದ ನಡುವೆ ಘರ್ಷಣೆಯ ಅಗತ್ಯವಿಲ್ಲ ಎಂದು ಅವರು ಒತ್ತಿ ಹೇಳಿದರು.
ಮಾವವೀಯ ಮೌಲ್ಯಗಳ ಅಡಿಪಾಯದ ಮೇಲೆ ಕಾನೂನುಗಳನ್ನು ರಚಿಸಲಾಗಿದೆ. ಮಾನವೀಯ ಮೌಲ್ಯಗಳು ಕುಸಿದರೆ ಇಡೀ ವ್ಯವಸ್ಥೆಯೇ ಕುಸಿಯುತ್ತದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!