ಫಾರೂಕ್ ಅಬ್ದುಲ್ಲಾ 
ದೇಶ

ಕಾಶ್ಮೀರ ವಿಶೇಷ ಸ್ಥಾನಮಾನ ತೆಗೆದು ಹಾಕಿದರೆ ಪರಿಸ್ಥಿತಿ ನಿಯಂತ್ರಣ ಕಷ್ಟವಾಗಲಿದೆ: ಫಾರೂಕ್ ಅಬ್ದುಲ್ಲಾ

ತನ್ನ ಜೀವಿತದ ಅಂತ್ಯದವರೆಗೂ ಆರ್ಟಿಕಲ್ 35-ಎ ರಕ್ಷಣೆಗಾಗಿ ಹೋರಾಡುತ್ತೇನೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಶ್ರೀನಗರ: ತನ್ನ ಜೀವಿತದ ಅಂತ್ಯದವರೆಗೂ ಆರ್ಟಿಕಲ್ 35-ಎ ರಕ್ಷಣೆಗಾಗಿ ಹೋರಾಡುತ್ತೇನೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಜಮ್ಮು-ಕಾಶ್ಮೀರದ ಜನರಿಗೆ ವಿಶೇಷ ಹಕ್ಕುಗಳು ಮತ್ತು ಸೌಲಭ್ಯಗಳನ್ನು ನೀಡುವ ಆರ್ಟಿಕಲ್  35-ಎ, ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. 
"ನಾನು ನನ್ನ ಕಡೆಯುಸಿರು ಇರುವವರೆಗೆ, ನನ್ನ ಸಮಾಧಿಯಾಗುವವರೆಗೆ ನೀಡುವ ಆರ್ಟಿಕಲ್  35-ಎ ರಕ್ಷಣೆಗಾಗಿ ಹೋರಾಡುತ್ತೇನೆ." ಎಂದು ಅಬ್ದುಲ್ಲಾ ಹೇಳಿದ್ದಾರೆ.ಅಲ್ಲದೆ ಕಾಶ್ಮೀರ ವಿಶೇಷ ಸ್ಥಾನಮಾನವನ್ನು ವಿರೋಧಿಸುತ್ತಿರುವವರು ಕೇವಲ ಕಾಶ್ಮೀರವನ್ನು ಮಾತ್ರವೇ ಗಮನಿಸುತ್ತಿದ್ದಾರೆ, ಆದರೆ ಹಿಮಾಚಲ ಪ್ರದೇಶ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್ ಸಹ ವಿಶೇಷ ಸ್ಥಾನಮಾನ ಅನುಭವಿಸುತ್ತಿದೆ. ಇದರ ಕುರಿತು ಯಾರೂ ಮಾತನಾಡುತ್ತಿಲ್ಲ. ಎಂದರು.
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ತೆಗೆದು ಹಾಕಿದ್ದಾದರೆ ಪರಿಸ್ಥಿತಿಯನ್ನು ನಿಯಂತ್ರಿಸುವುದು ಬಹಳ ಕಠಿಣವಾಗಲಿದೆ ಎಂದ ಅಬ್ದುಲ್ಲಾ "ನೀವು ಪರಿಸ್ಥಿತಿಯನ್ನು ಗಮನಿಸಲಿದ್ದೀರಿ, ದೆಹಲಿಯು  (ಕೇಂದ್ರ ಸರ್ಕಾರ) ಸಹ ಅದನ್ನು ನಿಯಂತ್ರಿಸುವುದು ಕಠಿಣವಾಗಲಿದೆ" ಎಂದರು.
ಶ್ರೀನಗರ ಕ್ಷೇತ್ರದ ಸಂಸತ್ ಸದಸ್ಯರಾಗಿರುವ ಅಬ್ದುಲ್ಲಾ ಸಂವಿಧಾನದ ಆರ್ಟಿಕಲ್ 35-ಎ ಕುರಿತಂತೆ ""ಅವರು (ಆರ್ಟಿಕಲ್) 35-ಎ ಸ್ಪರ್ಶಿಸಲು ಸಾಧ್ಯವಿಲ್ಲ.ಸಂವಿಧಾನಾತ್ಮಕ ಪೀಠವು ಈಗಾಗಲೇ ಅದರ ಬಗ್ಗೆ ಎರಡು ಬಾರಿ ಹೇಳಿದೆ.ಅವರು ಏಕೆ ಈ ಗಾಯವನ್ನು ಕೆರೆದು ದೊಡ್ಡದಾಗಿಸಲು ಬಯಸುತ್ತಾರೆ ಎನ್ನುವುದು ನನಗೆ ತಿಳಿದಿಲ್ಲ. ಹೆಚ್ಚು ಕೆದಕಿದಂತೆ ಹೆಚ್ಚು ರಕ್ತ ಒಸರುತ್ತದೆ. ಈಗ ಈ ಗಾಯವನ್ನು ಕೆದರುವ ಕೆಲಸವನ್ನು ನಿಲ್ಲಿಸಬೇಕಾದ ಸಮಯ ಒದಗಿದೆ" ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT