ಸಂಗ್ರಹ ಚಿತ್ರ 
ದೇಶ

ಕೇರಳದಲ್ಲಿ ಮಳೆ: ಸಾವಿನ ಸಂಖ್ಯೆ 37ಕ್ಕೆ ಏರಿಕೆ, ನಾಳೆ ರಾಜನಾಥ್ ಸಿಂಗ್ ಭೇಟಿ

ಕೇರಳದಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿದ್ದ ಮಳೆಯಿಂದ ಸಾವಿಗೀಡಾದವರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. ರಾಜ್ಯದ 14 ಜಿಲ್ಲೆಗಳಲ್ಲಿ 11 ಜಿಲ್ಲೆಗಳು ನೆರೆಯಿಂದ ಜಲಾವೃತವಾಗಿದೆ,

ತಿರುವನಂತಪುರಂ: ಕೇರಳದಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿದ್ದ ಮಳೆಯಿಂದ ಸಾವಿಗೀಡಾದವರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. ರಾಜ್ಯದ 14 ಜಿಲ್ಲೆಗಳಲ್ಲಿ 11  ಜಿಲ್ಲೆಗಳು ನೆರೆಯಿಂದ ಜಲಾವೃತವಾಗಿದೆ,
ಸಧ್ಯ ಮಳೆ ತುಸು ಕಡಿಮೆಯಾಗಿದ್ದು ಶನಿವಾರ ಸಂಜೆಯ ವೇಳೆಗೆ ಪ್ರವಾಹ ಇಳಿಮುಖವಾಗಿದೆ.ಆದರೆ ಇನ್ನೂ ಒಂದು ದಿನ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜನರು ಜಾಗೃತರಾಗಿರುವಂತೆ ಎಚ್ಚರಿಕೆ ನೀಡಲಾಗಿದೆ.
ಸತತ ಮಳೆಯಿಂದ ರಾಜ್ಯಾದ್ಯಂತ  25 ಕಡೆ ಭೂಕುಸಿತ, ಗೋಡೆ ಕುಸಿತಗಳು ಉಂಟಾಗಿದೆ.ಅಳಪ್ಪುಳ, ಎರ್ನಾಕುಳಂ ಮತ್ತು ವಯನಾಡ್‌ ಜಿಲ್ಲೆಗಳು ಅತಿ ಹೆಚ್ಚು ಪ್ರವಾಹದಿಂದ ಹಾನಿಗೊಳಗಾಗಿದೆ.ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಸಂಖ್ಯೆಯ ನಿರಾಶ್ರಿತರ ಶಿಬಿರ ತೆರೆಯಲಾಗಿದೆ. 
ಭಾನುವಾರ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕೇರಳಕ್ಕೆ ಭೇಟಿ ನೀಡಲಿದ್ದಾರೆ.ರಾಜನಾಥ್ ಸಿಂಗ್ ಜತೆಗೆ  ಪ್ರವಾಸೋದ್ಯಮ ಸಚಿವ ಕೆ.ಜೆ. ಆಲ್ಫಾನ್ಸ್ ಮತ್ತು ನಿಯೋಗವಿರಲಿದ್ದು ನಿಯೋಗವು ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸುವ ನಿರೀಕ್ಷೆಯಿದೆ 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT