ಸಂಗ್ರಹ ಚಿತ್ರ 
ದೇಶ

ಡೊಕ್ಲಾಂ ವಿವಾದ ಈಗ ಮುಗಿದ ಅಧ್ಯಾಯ: ಚೀನಾ

ಭಾರತ ಮತ್ತು ಚೀನಾ ದೇಶಗಳ ನಡುವಿನ ಡೊಕ್ಲಾಂ ಗಡಿ ವಿವಾದ ಈಗ ಮುಗಿದ ಅಧ್ಯಾಯವಾಗಿದ್ದು, ಉಭಯ ದೇಶಗಳು ವಿವಾದದ ಹೊರತಾಗಿ ದ್ವಿಪಕ್ಷೀಯ ಸಂಬಂಧ ಉತ್ತಮಗೊಳಿಸುವತ್ತ ಮುನ್ನಡೆದಿವೆ ಎಂದು ಚೀನಾ ಹೇಳಿದೆ.

ನವದೆಹಲಿ: ಭಾರತ ಮತ್ತು ಚೀನಾ ದೇಶಗಳ ನಡುವಿನ ಡೊಕ್ಲಾಂ ಗಡಿ ವಿವಾದ ಈಗ ಮುಗಿದ ಅಧ್ಯಾಯವಾಗಿದ್ದು, ಉಭಯ ದೇಶಗಳು ವಿವಾದದ ಹೊರತಾಗಿ ದ್ವಿಪಕ್ಷೀಯ ಸಂಬಂಧ ಉತ್ತಮಗೊಳಿಸುವತ್ತ ಮುನ್ನಡೆದಿವೆ ಎಂದು ಚೀನಾ ಹೇಳಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾರತದ ಚೀನಾ ರಾಯಭಾರಿ ಲುವೊ ಝಾಹೋಯಿಯಿ ಅವರು, ಭಾರತ ಮತ್ತು ಚೀನಾ ದೇಶಗಳ ನಡುವಿನ ಸಂಬಂಧದ ಪುಸ್ತಕದಲ್ಲಿ ಡೊಕ್ಲಾಂ ಎಂಬ ಪುಟವನ್ನು ನಾವು ತಿರುವಿ ಹಾಕಿ ಮುಂದಿನ ಪುಟಕ್ಕೆ ಸಾಗಿದ್ದೇವೆ. ಅದು ಈಗ ಮುಗಿದ ಅಧ್ಯಾಯ. ಡೊಕ್ಲಾಂ ಹೊರತಾಗಿಯೂ ಭಾರತ ಮತ್ತು ಚೀನಾ ಸಾಕಷ್ಟು ವಿಚಾರಗಳಲ್ಲಿ ಸೌಹಾರ್ಧ ಸಂಬಂಧ ಹೊಂದಿವೆ. ಕೇವಲು ಒಂದೇ ಒಂದು ವಿಚಾರದಿಂದ ಈ ಸಂಬಂಧ ಹಳಸಲು ಸಾಧ್ಯವಿಲ್ಲ. ಇದೇ ಕಾರಣಕ್ಕೆ ಡೊಕ್ಲಾಂ ವಿಚಾರದ ಬಳಿಕವೂ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಒಂದೇ ವರ್ಷದಲ್ಲಿ ಸಾಕಷ್ಟು ಭಾರಿ ಭೇಟಿಯಾಗಿದ್ದಾರೆ. ಇದು ಉಭಯ ದೇಶಗಳ ನಾಯಕರಿಗೆ ಪರಸ್ಪರ ಇರುವ ಗೌರವ ಮತ್ತು ನಂಬಿಕೆಗೆ ಸಾಕ್ಷಿ ಎಂದು ಹೇಳಿದ್ದಾರೆ.
ಅಂತೆಯೇ ಇತ್ತೀಚಿನ ದಿನಗಳಲ್ಲಿ ಭಾರತ ಮತ್ತು ಚೀನಾ ನಡುವಿನ ಸಂಬಂಧ ಗಣನೀಯವಾಗಿ ಉತ್ತಮಗೊಳ್ಳುತ್ತಿದೆ. ಇದು ನಿಜಕ್ಕೂ ಸಂತಸದ ವಿಚಾರ. ನಮ್ಮ ಮುಂದೆ ಇನ್ನೂ ಸಾಕಷ್ಟು ಗಂಭೀರ ಸಮಸ್ಯೆಗಳಿದ್ದು ಈ ಸಮಸ್ಯೆಗಳ ವಿರುದ್ಧ ಭಾರತ ಮತ್ತು ಚೀನಾ ಹೋರಾಡಬೇಕಿದೆ ಎಂದು ಲುವೊ ಝಾಹೋಯಿಯಿ ಅವರು ಹೇಳಿದ್ದಾರೆ.
ಏತನ್ಮಧ್ಯೆ 73 ದಿನಗಳ ಕಾಲ ಭಾರತ ಮತ್ತು ಚೀನಾ ನಡುವಿನ ಶೀತಲ ಸಮರಕ್ಕೆ ಕಾರಣವಾಗಿದ್ದ ಡೊಕ್ಲಾಂ ಗಡಿಭಾಗದಲ್ಲಿ ಚೀನಾ ಸೇನೆ ರಸ್ತೆ ನಿರ್ಮಾಣ ಮಾಡುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ವರದಿಗೆ ಸ್ಪಷ್ಟನೆ ನೀಡಿರುವ ಚೀನಾ ಸೇನೆ ತಮ್ಮ ಗಡಿ ಭಾಗದಲ್ಲಿ ಮಾತ್ರ ತಾವು ರಸ್ತೆ ನಿರ್ಮಾಣ ಕಾಮಗಾರಿ ಮಾಡುತ್ತಿದ್ದೇವೆ ಎಂದು ಹೇಳಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT