ಸಂಗ್ರಹ ಚಿತ್ರ 
ದೇಶ

ಡೊಕ್ಲಾಂ ವಿವಾದ ಈಗ ಮುಗಿದ ಅಧ್ಯಾಯ: ಚೀನಾ

ಭಾರತ ಮತ್ತು ಚೀನಾ ದೇಶಗಳ ನಡುವಿನ ಡೊಕ್ಲಾಂ ಗಡಿ ವಿವಾದ ಈಗ ಮುಗಿದ ಅಧ್ಯಾಯವಾಗಿದ್ದು, ಉಭಯ ದೇಶಗಳು ವಿವಾದದ ಹೊರತಾಗಿ ದ್ವಿಪಕ್ಷೀಯ ಸಂಬಂಧ ಉತ್ತಮಗೊಳಿಸುವತ್ತ ಮುನ್ನಡೆದಿವೆ ಎಂದು ಚೀನಾ ಹೇಳಿದೆ.

ನವದೆಹಲಿ: ಭಾರತ ಮತ್ತು ಚೀನಾ ದೇಶಗಳ ನಡುವಿನ ಡೊಕ್ಲಾಂ ಗಡಿ ವಿವಾದ ಈಗ ಮುಗಿದ ಅಧ್ಯಾಯವಾಗಿದ್ದು, ಉಭಯ ದೇಶಗಳು ವಿವಾದದ ಹೊರತಾಗಿ ದ್ವಿಪಕ್ಷೀಯ ಸಂಬಂಧ ಉತ್ತಮಗೊಳಿಸುವತ್ತ ಮುನ್ನಡೆದಿವೆ ಎಂದು ಚೀನಾ ಹೇಳಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾರತದ ಚೀನಾ ರಾಯಭಾರಿ ಲುವೊ ಝಾಹೋಯಿಯಿ ಅವರು, ಭಾರತ ಮತ್ತು ಚೀನಾ ದೇಶಗಳ ನಡುವಿನ ಸಂಬಂಧದ ಪುಸ್ತಕದಲ್ಲಿ ಡೊಕ್ಲಾಂ ಎಂಬ ಪುಟವನ್ನು ನಾವು ತಿರುವಿ ಹಾಕಿ ಮುಂದಿನ ಪುಟಕ್ಕೆ ಸಾಗಿದ್ದೇವೆ. ಅದು ಈಗ ಮುಗಿದ ಅಧ್ಯಾಯ. ಡೊಕ್ಲಾಂ ಹೊರತಾಗಿಯೂ ಭಾರತ ಮತ್ತು ಚೀನಾ ಸಾಕಷ್ಟು ವಿಚಾರಗಳಲ್ಲಿ ಸೌಹಾರ್ಧ ಸಂಬಂಧ ಹೊಂದಿವೆ. ಕೇವಲು ಒಂದೇ ಒಂದು ವಿಚಾರದಿಂದ ಈ ಸಂಬಂಧ ಹಳಸಲು ಸಾಧ್ಯವಿಲ್ಲ. ಇದೇ ಕಾರಣಕ್ಕೆ ಡೊಕ್ಲಾಂ ವಿಚಾರದ ಬಳಿಕವೂ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಒಂದೇ ವರ್ಷದಲ್ಲಿ ಸಾಕಷ್ಟು ಭಾರಿ ಭೇಟಿಯಾಗಿದ್ದಾರೆ. ಇದು ಉಭಯ ದೇಶಗಳ ನಾಯಕರಿಗೆ ಪರಸ್ಪರ ಇರುವ ಗೌರವ ಮತ್ತು ನಂಬಿಕೆಗೆ ಸಾಕ್ಷಿ ಎಂದು ಹೇಳಿದ್ದಾರೆ.
ಅಂತೆಯೇ ಇತ್ತೀಚಿನ ದಿನಗಳಲ್ಲಿ ಭಾರತ ಮತ್ತು ಚೀನಾ ನಡುವಿನ ಸಂಬಂಧ ಗಣನೀಯವಾಗಿ ಉತ್ತಮಗೊಳ್ಳುತ್ತಿದೆ. ಇದು ನಿಜಕ್ಕೂ ಸಂತಸದ ವಿಚಾರ. ನಮ್ಮ ಮುಂದೆ ಇನ್ನೂ ಸಾಕಷ್ಟು ಗಂಭೀರ ಸಮಸ್ಯೆಗಳಿದ್ದು ಈ ಸಮಸ್ಯೆಗಳ ವಿರುದ್ಧ ಭಾರತ ಮತ್ತು ಚೀನಾ ಹೋರಾಡಬೇಕಿದೆ ಎಂದು ಲುವೊ ಝಾಹೋಯಿಯಿ ಅವರು ಹೇಳಿದ್ದಾರೆ.
ಏತನ್ಮಧ್ಯೆ 73 ದಿನಗಳ ಕಾಲ ಭಾರತ ಮತ್ತು ಚೀನಾ ನಡುವಿನ ಶೀತಲ ಸಮರಕ್ಕೆ ಕಾರಣವಾಗಿದ್ದ ಡೊಕ್ಲಾಂ ಗಡಿಭಾಗದಲ್ಲಿ ಚೀನಾ ಸೇನೆ ರಸ್ತೆ ನಿರ್ಮಾಣ ಮಾಡುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ವರದಿಗೆ ಸ್ಪಷ್ಟನೆ ನೀಡಿರುವ ಚೀನಾ ಸೇನೆ ತಮ್ಮ ಗಡಿ ಭಾಗದಲ್ಲಿ ಮಾತ್ರ ತಾವು ರಸ್ತೆ ನಿರ್ಮಾಣ ಕಾಮಗಾರಿ ಮಾಡುತ್ತಿದ್ದೇವೆ ಎಂದು ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್

SCROLL FOR NEXT