ಸಂಗ್ರಹ ಚಿತ್ರ 
ದೇಶ

ಪ್ರಾಣದ ಹಂಗು ತೊರೆದು ಮುಳುಗುತ್ತಿದ್ದ ಸೇತುವೆಯಿಂದ ಮಗು ರಕ್ಷಿಸಿದ ಎನ್‍ಡಿಆರ್‌ಎಫ್ ಸಿಬ್ಬಂದಿ!

ಕೇರಳದಲ್ಲಿ ಎಡಬಿಡದೆ ಸುರಿಯುತ್ತಿರುವ ಮಹಾಮಳೆಯಿಂದಾಗಿ ಜಲಾಶಯಗಳೆಲ್ಲಾ ತುಂಬಿ ಹರಿಯುತ್ತಿದ್ದು ಗ್ರಾಮಗಳೆ ನೀರಿನಿಂದ ಜಲಾವೃತಗೊಂಡಿವೆ...

ಇಡುಕ್ಕಿ(ಕೇರಳ): ಕೇರಳದಲ್ಲಿ ಎಡಬಿಡದೆ ಸುರಿಯುತ್ತಿರುವ ಮಹಾಮಳೆಯಿಂದಾಗಿ ಜಲಾಶಯಗಳೆಲ್ಲಾ ತುಂಬಿ ಹರಿಯುತ್ತಿದ್ದು ಗ್ರಾಮಗಳೆ ನೀರಿನಿಂದ ಜಲಾವೃತಗೊಂಡಿವೆ. 
ತುಂಬಿ ಹರಿಯುತ್ತಿದ್ದ ನೀರಿನ ರಭಸದಲ್ಲಿ ಇನ್ನೇನು ಸೇತುವೆಯೊಂದು ಮುಳಗಡೆಯಾಗಬೇಕಿತ್ತು. ಅಷ್ಟದಲ್ಲಿ ಆಚೆದಡದಲ್ಲಿ ತಂದೆ ಹಾಗೂ ಪುಟ್ಟ ಮಗು ರಕ್ಷಣೆಗಾಗಿ ಕಾದುಕುಳಿತ್ತಿದ್ದರು. ಇದನ್ನು ಗಮನಿಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ(ಎನ್‌ಡಿಆರ್‌ಎಫ್)ದ ಅಧಿಕಾರಿ ಕನ್ಹಯ್ಯ ಕುಮಾರ್ ತಮ್ಮ ಜೀವದ ಹಂಗನ್ನು ತೊರೆದು ಸೇತುವೆ ಮೇಲೆ ಓಡಿ ಮಗುವನ್ನು ಹೆಗಲ ಮೇಲೆ ಹಾಕಿಕೊಂಡು ಓಡಿ ಬಂದಿದ್ದಾರೆ. ಇವರ ಜೊತೆಗೆ ಮಗುವಿನ ತಂದೆ ಸಹ ಧೈರ್ಯವಾಗಿ ಸೇತುವೆ ಮೇಲೆ ಓಡಿ ಬಂದಿದ್ದು ಒಟ್ಟಿನಲ್ಲಿ ಕನ್ಹಯ್ಯ ಕುಮಾರ್ ಅವರ ಕರ್ತವ್ಯಪ್ರಜ್ಞೆಯಿಂದ ತಂದೆ ಮಗಳು ಸುರಕ್ಷಿತವಾಗಿದ್ದಾರೆ. 
ಅಪಾಯಕಾರಿ ಸನ್ನಿವೇಶದಲ್ಲಿ ಜೀವದ ಹಂಗು ತೊರೆದು ಮಗುವೊಂದನ್ನು ಕಾಪಾಡಿದ ಕನ್ಹಯ್ಯ ಕುಮಾರ್ ಇದೀಗ ಕೇರಳದಲ್ಲಿ ಹೀರೋ ಆಗಿದ್ದಾರೆ. 
ಎನ್‌ಡಿಆರ್‌ಎಫ್ ನ ಒಟ್ಟು 14 ತಂಡಗಳ 404 ಸಿಬ್ಬಂದಿ ಕೇರಳ ಇಡುಕ್ಕಿ, ವಯನಾಡ್, ಅಲಪುಜಾ, ಎರ್ನಾಕುಲಂ ಮತ್ತು ತ್ರಿಶೂರ್ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. 
ಮಹಾ ಮಳೆ ಮತ್ತು ಭೂಕುಸಿತದಿಂದಾಗಿ ಆಗಸ್ಟ್ 8ರಿಂದ ಈಚೆಗೆ ಕೇರಳದಲ್ಲಿ ಒಟ್ಟು 37 ಮಂದಿ ಮೃತಪಟ್ಟಿದ್ದಾರೆ. ಇನ್ನು ಪ್ರವಾಹ ಪೀಡಿತ ಪ್ರದೇಶಗಳಿಂದ ಸುಮಾರು 54 ಸಾವಿರ ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT