ವಿ.ಎಸ್, ನೈಪಾಲ್ 
ದೇಶ

ವಿ.ಎಸ್. ನೈಪಾಲ್ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವು ರಾಜಕೀಯ ಮುಖಂಡರ ಸಂತಾಪ

ನೊಬೆಲ್ ಸಾಹಿತ್ಯ ಪ್ರಶಸ್ತಿ ಲೇಖಕ ವಿ. ಎಸ್. ನೈಪಾಲ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರಮೋದಿ ಸೇರಿದಂತೆ ರಾಜಕೀಯ ಕ್ಷೇತ್ರದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ನವದೆಹಲಿ: ನೊಬೆಲ್  ಸಾಹಿತ್ಯ  ಪ್ರಶಸ್ತಿ ಲೇಖಕ ವಿ. ಎಸ್. ನೈಪಾಲ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರಮೋದಿ ಸೇರಿದಂತೆ  ರಾಜಕೀಯ ಕ್ಷೇತ್ರದ ಹಲವು ಗಣ್ಯರು  ಸಂತಾಪ ಸೂಚಿಸಿದ್ದಾರೆ.

ವಿ.ಎಸ್. ನೈಪಾಲ್ ಅವರ ನಿಧನದಿಂದಾಗಿ ವಿಶ್ವ ಸಾಹಿತ್ಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು  ಮೋದಿ ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

ವಸಾಹತುಶಾಹಿ, ಆದರ್ಶವಾದಿ, ಧರ್ಮ ಮತ್ತು ರಾಜಕೀಯ ವಿಚಾರಗಳಿಗೆ ಸಂಬಂಧಿಸಿದ ವಿಮರ್ಶಾತ್ಮಕ ವ್ಯಾಖ್ಯಾನಗಳಿಂದ ನೈಪಾಲ್  ಹೆಸರುವಾಸಿಯಾಗಿದ್ದರು.  85 ವರ್ಷದ ನೈಪಾಲ್  ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ನೈಪಾಲ್ ಅವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ 1971ರಲ್ಲಿ  ಮ್ಯಾನ್ ಬುಕರ್  , 1990ರಲ್ಲಿ ನೈಟ್ ಹುಡ್  ಪ್ರಶಸ್ತಿ  ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕಾರಗಳು ಸಂದಿದ್ದವು. 2001ರಲ್ಲಿ ಅವರಿಗೆ ನೊಬೆಲ್ ಪ್ರಶಸ್ತಿ ಬಂದಿತ್ತು.  ಇತಿಹಾಸ, ಸಂಸ್ಕೃತಿ, ವಸಾಹತುಷಾಹಿ, ರಾಜಕೀಯ ಸೇರಿದಂತೆ ಹಲವು ವಿಚಾರಗಳಲ್ಲಿ ಅವರ  ವ್ಯಾಪಕ ಕಾರ್ಯಗಳಿಂದ  ಅವರು ನೆನಪಾಗಲಿದ್ದಾರೆ ಎಂದು ಪ್ರಧಾನಿ ಮೋದಿ ಟ್ವಿಟರ್ ನಲ್ಲಿ  ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT