ಕಿರಣ್ ರಿಜಿಜು, ಕೆನ್ನಿತ್ ಐ. ಜಸ್ಟರ್ 
ದೇಶ

ಭಾರತ, ಅಮೆರಿಕಾ ಜಂಟಿಯಾಗಿ ಭಯೋತ್ಪಾದನೆ ಎದುರಿಸಲು ಬದ್ಧ- ಕಿರಣ್ ರಿಜಿಜು

ಅಮೆರಿಕಾದ ಭಾರತೀಯ ರಾಯಭಾರಿ ಕೆನ್ನಿತ್ ಐ. ಜಸ್ಟರ್ ಹಾಗೂ ಇತರ ಅಧಿಕಾರಿಗಳೊಂದಿಗೆ ಇಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಮಾತುಕತೆ ನಡೆಸಿದರು.

ನವದೆಹಲಿ:ಅಮೆರಿಕಾದ ಭಾರತೀಯ ರಾಯಭಾರಿ ಕೆನ್ನಿತ್ ಐ. ಜಸ್ಟರ್ ಹಾಗೂ ಇತರ ಅಧಿಕಾರಿಗಳೊಂದಿಗೆ ಇಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಮಾತುಕತೆ ನಡೆಸಿದರು.

ಭಯೋತ್ಪಾದನೆ ನಿಗ್ರಹ ಹಾಗೂ ವಿಶ್ವಶಾಂತಿಗಾಗಿ ಉಭಯ ದೇಶಗಳು ಬದ್ಧವಾಗಿರುವುದಾಗಿ  ಎರಡು ದೇಶಗಳ ನಾಯಕರು ಪುನರ್ ಉಚ್ಚರಿಸಿದರು.

ಈ ನಿಟ್ಟಿನಲ್ಲಿ, ಭಾರತ ಮತ್ತು ಅಮೆರಿಕ ನಡುವೆ  ನಡೆಯುತ್ತಿರುವ ಸ್ವದೇಶಗಳ ಭದ್ರತಾ ಮಾತುಕತೆ  ಮುಂದುವರಿಸಲು ಜಸ್ಟ್ ತಮ್ಮ ದೇಶದ ಉತ್ಸಾಹವನ್ನು ವ್ಯಕ್ತಪಡಿಸಿದರು. ಮಾತುಕತೆ ಸಂದರ್ಭದಲ್ಲಿ ಭಾರತ- ಅಮೆರಿಕಾ ನಡುವಿನ ಒಪ್ಪಂದವನ್ನು ಮತ್ತಷ್ಟು ಬಲಗೊಳಿಸುವ ಕ್ರಮಗಳ ಬಗ್ಗೆಯೂ ಉಭಯ ನಾಯಕರು ಮಾತುಕತೆ ನಡೆಸಿದರು.

ಕಿರಣ್ ರಿಜಿಜು ಅವರೊಂದಿಗೆ ಮಾತುಕತೆ ಫಲಪ್ರಧವಾಗಿತ್ತು ಎಂದು ಜಸ್ಟರ್ ಟ್ವಿಟರ್ ನಲ್ಲಿ  ಪೋಟೋಗಳನ್ನು ಹಂಚಿಕೊಂಡಿದ್ದಾರೆ.

ಕಿರಣ್ ರಿಜಿಜು ಕೂಡಾ  ಟ್ವಿಟರ್ ನಲ್ಲಿ ಪೋಟೋ ಹಾಕಿಕೊಂಡಿದ್ದು,  ಭದ್ರತೆ ಕುರಿತು ವ್ಯಾಪಕ ರೀತಿಯಲ್ಲಿ ಮಾತುಕತೆ ನಡೆದಿದ್ದು, ಈ ಸಭೆ ತಮ್ಮಗೆ ಸಂತಸ ತಂದಿದೆ ಎಂದು ಹೇಳಿದ್ದಾರೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT