ಕಿರಣ್ ರಿಜಿಜು, ಕೆನ್ನಿತ್ ಐ. ಜಸ್ಟರ್ 
ದೇಶ

ಭಾರತ, ಅಮೆರಿಕಾ ಜಂಟಿಯಾಗಿ ಭಯೋತ್ಪಾದನೆ ಎದುರಿಸಲು ಬದ್ಧ- ಕಿರಣ್ ರಿಜಿಜು

ಅಮೆರಿಕಾದ ಭಾರತೀಯ ರಾಯಭಾರಿ ಕೆನ್ನಿತ್ ಐ. ಜಸ್ಟರ್ ಹಾಗೂ ಇತರ ಅಧಿಕಾರಿಗಳೊಂದಿಗೆ ಇಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಮಾತುಕತೆ ನಡೆಸಿದರು.

ನವದೆಹಲಿ:ಅಮೆರಿಕಾದ ಭಾರತೀಯ ರಾಯಭಾರಿ ಕೆನ್ನಿತ್ ಐ. ಜಸ್ಟರ್ ಹಾಗೂ ಇತರ ಅಧಿಕಾರಿಗಳೊಂದಿಗೆ ಇಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಮಾತುಕತೆ ನಡೆಸಿದರು.

ಭಯೋತ್ಪಾದನೆ ನಿಗ್ರಹ ಹಾಗೂ ವಿಶ್ವಶಾಂತಿಗಾಗಿ ಉಭಯ ದೇಶಗಳು ಬದ್ಧವಾಗಿರುವುದಾಗಿ  ಎರಡು ದೇಶಗಳ ನಾಯಕರು ಪುನರ್ ಉಚ್ಚರಿಸಿದರು.

ಈ ನಿಟ್ಟಿನಲ್ಲಿ, ಭಾರತ ಮತ್ತು ಅಮೆರಿಕ ನಡುವೆ  ನಡೆಯುತ್ತಿರುವ ಸ್ವದೇಶಗಳ ಭದ್ರತಾ ಮಾತುಕತೆ  ಮುಂದುವರಿಸಲು ಜಸ್ಟ್ ತಮ್ಮ ದೇಶದ ಉತ್ಸಾಹವನ್ನು ವ್ಯಕ್ತಪಡಿಸಿದರು. ಮಾತುಕತೆ ಸಂದರ್ಭದಲ್ಲಿ ಭಾರತ- ಅಮೆರಿಕಾ ನಡುವಿನ ಒಪ್ಪಂದವನ್ನು ಮತ್ತಷ್ಟು ಬಲಗೊಳಿಸುವ ಕ್ರಮಗಳ ಬಗ್ಗೆಯೂ ಉಭಯ ನಾಯಕರು ಮಾತುಕತೆ ನಡೆಸಿದರು.

ಕಿರಣ್ ರಿಜಿಜು ಅವರೊಂದಿಗೆ ಮಾತುಕತೆ ಫಲಪ್ರಧವಾಗಿತ್ತು ಎಂದು ಜಸ್ಟರ್ ಟ್ವಿಟರ್ ನಲ್ಲಿ  ಪೋಟೋಗಳನ್ನು ಹಂಚಿಕೊಂಡಿದ್ದಾರೆ.

ಕಿರಣ್ ರಿಜಿಜು ಕೂಡಾ  ಟ್ವಿಟರ್ ನಲ್ಲಿ ಪೋಟೋ ಹಾಕಿಕೊಂಡಿದ್ದು,  ಭದ್ರತೆ ಕುರಿತು ವ್ಯಾಪಕ ರೀತಿಯಲ್ಲಿ ಮಾತುಕತೆ ನಡೆದಿದ್ದು, ಈ ಸಭೆ ತಮ್ಮಗೆ ಸಂತಸ ತಂದಿದೆ ಎಂದು ಹೇಳಿದ್ದಾರೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT