ಸಂಗ್ರಹ ಚಿತ್ರ 
ದೇಶ

ಕೇರಳ ಚರ್ಚ್ ಲೈಂಗಿಕ ಕಿರುಕುಳ ಪ್ರಕರಣ: ಮತ್ತಿಬ್ಬರು ಪಾದ್ರಿಗಳು ಶರಣು

ಚರ್ಚ್ ಪಾದ್ರಿಗಳು ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತಿಬ್ಬರು ಪಾದ್ರಿಗಳು ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ಕೊಟ್ಟಾಯಂ: ಚರ್ಚ್ ಪಾದ್ರಿಗಳು ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತಿಬ್ಬರು ಪಾದ್ರಿಗಳು ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಲೈಂಗಿಕ ಕಿರುಕುಳ ವಿಚಾರವಾಗಿ ಕೇರಳದ ಕೊಟ್ಟಾಯಂ ಬಳಿಯ ಮಲಂಕ್ಕಾರಾ ಆರ್ಥಡಾಕ್ಸ್‌ ಚರ್ಚಿನ ಮತ್ತಿಬ್ಬರು ಪಾದ್ರಿಗಳು ಪೊಲೀಸರಿಗೆ ಶರಣಾಗಿದ್ದು, ಶರಣಾದ ಪಾದ್ರಿಗಳನ್ನು ಅಬ್ರಹಂ ವರ್ಗೀಸ್ ಹಾಗು ಜೈಸೆ ಕೆ ಜಾರ್ಜ್ ಎಂದು ಗುರುತಿಸಲಾಗಿದೆ. ಇಬ್ಬರೂ ಪಾದ್ರಿಗಳನ್ನು ಕೊಲ್ಲಂ ಕ್ರೈಂ ಬ್ರಾಂಚ್‌ ಪೊಲೀಸರು ನ್ಯಾಯಾಲಯಕ್ಕೆ ಕರೆತಂದಿದ್ದಾರೆ. 
ಇದೇ ಪ್ರಕರಣ ಸಂಬಂಧ  ಇನ್ನಿಬ್ಬರು ಆರೋಪಿ ಪಾದ್ರಿಗಳಾದ ಜಾನ್ಸನ್‌ ವಿ ಮ್ಯಾಥ್ಯೂ ಹಾಗೂ ಜಾಬ್‌ ಮ್ಯಾಥ್ಯೂರನ್ನು ಪೊಲೀಸರು ಬಂಧಿಸಿದ್ದರು.
ಏನಿದು ಪ್ರಕರಣ?
ಕೊಟ್ಟಾಯಂ ಬಳಿಯ ಮಲಂಕ್ಕಾರಾ ಆರ್ಥಡಾಕ್ಸ್‌ ಚರ್ಚನ ಪಾದ್ರಿಗಳು ವಿವಾಹಿತ ಮಹಿಳೆಯ ಜೀವನದ ಕೆಲ ರಹಸ್ಯಗಳನ್ನು ಇಟ್ಟುಕೊಂಡು ಬ್ಲಾಕ್‌ಮೇಲ್‌ ಮಾಡಿ, ಆಕೆಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಿದ್ದರು. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು. ಅಲ್ಲದೆ ಮಹಿಳೆಯ ಮೇಲೆ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದ ನಾಲ್ವರು ಪಾದ್ರಿಗಳ ವಿಚಾರವಾಗಿ ಈ ಚರ್ಚ್‌ ಸಾಕಷ್ಟು ವಿವಾದಕ್ಕೆ ಈಡಾಗಿದೆ. ತನ್ನ ಬಳಿ ಸಾಕಷ್ಟು ಸಾಕ್ಷಿ ಇದೇ ಎಂದು ಹೇಳಿರುವ ಮಹಿಳೆಯ ಪತಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣದ ವಿಚಾರಣೆ ಪ್ರಗತಿಯಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT