ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಹಾಗೂ ರಾಷ್ಟ್ರಪತಿ ರಾಮನಾಥ ಕೋವಿಂದ್ 
ದೇಶ

ಸೋಮನಾಥ್ ಚಟರ್ಜಿ ಅಗಲಿಕೆ ನೋವು ತಂದಿದೆ: ರಾಷ್ಟ್ರಪತಿ ಕೋವಿಂದ್

ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿ ಅಗಲಿಕೆಯಿಂದ ಬಹಳ ನೋವಾಗಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ಹೇಳಿದ್ದಾರೆ...

ನವದೆಹಲಿ: ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿ ಅಗಲಿಕೆಯಿಂದ ಬಹಳ ನೋವಾಗಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ಹೇಳಿದ್ದಾರೆ. 
ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸೋಮನಾಥ್ ಚಟರ್ಜಿಯವರು ಲೋಕಸಭೆ ಸ್ಪೀಕ್ರ ಹಾಗೂ ಸಂಸತ್ತಿನ ಹಿರಿಯ ಸದಸ್ಯರಾಗಿದ್ದರು. ಸದನದಲ್ಲಿ ಹೆಚ್ಚಿನ ಬಲದಿಂದ ಉಪಸ್ಥಿತರಿರುತ್ತಿದ್ದರು. ಚಟರ್ಜಿ ಅಗಲಿಕೆ ಬಂಗಾಳ ಹಾಗೂ ಭಾರತಕ್ಕೆ ಭರಿಸಲಾಗದ ನಷ್ಟ. ಚಟರ್ಜಿಯವರ ಕುಟುಂಬದ ಕುರಿತು ಸಂತಾಪ ಸೂಚಿಸುತ್ತೇನೆಂದು ಹೇಳಿದ್ದಾರೆ. 
ಇದರಂತೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೂ ಕೂಡ ಸಂತಾಪವನ್ನು ಸೂಚಿಸಿದ್ದು, ಲೋಸಸಭೆ ಮಾಜಿ ಸ್ಪೀಕರ್ ನಿಧನ ಸುದ್ದಿ ಬಹಳ ಬೇಸರವನ್ನುಂಟು ಮಾಡಿದೆ. ಸಂಸತ್ತಿನಲ್ಲಿ ಅತ್ಯುತ್ತಮ ಸದಸ್ಯರಾಗಿದ್ದರು. ಲೋಕಸಭೆಗೆ 10 ಬಾರಿ ಆಯ್ಕೆಯಾಗಿ ಬಂದಿದ್ದರು. ಸದಾಕಾಲ ಜನರ ಸಂಕಷ್ಟಗಳನ್ನು ಎಲ್ಲರ ಗಮನಕ್ಕೆ ತರುತ್ತಿದ್ದರು. ತಾವು ನಂಬಿದ್ದ ತತ್ವಗಳಿಗೆ ದೃಢವಾಗಿ ನಿಲ್ಲುತ್ತಿದ್ದರು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT