ಬಿಜೆಪಿ ಸಂಸದ ಒಪಿ ಮಥುರ್ 
ದೇಶ

2019 ಚುನಾವಣೆ ಬಳಿಕ ದೇಶದಾದ್ಯಂತ ಎನ್ಆರ್'ಸಿ ಜಾರಿಗೆ ತರಲಾಗುವುದು: ಬಿಜೆಪಿ ಸಂಸದ

2019ರ ಲೋಕಸಭಾ ಚುನಾವಣೆ ಪೂರ್ಣಗೊಂಡ ಬಳಿಕ ಇಡೀ ದೇಶದಾದ್ಯಂತ ರಾಷ್ಟ್ರೀಯ ಪೌರ ನೋಂದಣಿ (ಎನ್ಆರ್'ಸಿ)ಯನ್ನು ಜಾರಿಗೆ ತರಲಾಗುತ್ತದೆ ಎಂದು ಬಿಜೆಪಿ ಸಂಸದ ಒಪಿ ಮಥುರ್ ಅವರು ಸೋಮವಾರ ಹೇಳಿದ್ದಾರೆ...

ಜುಂಜುನು: 2019ರ ಲೋಕಸಭಾ ಚುನಾವಣೆ ಪೂರ್ಣಗೊಂಡ ಬಳಿಕ ಇಡೀ ದೇಶದಾದ್ಯಂತ ರಾಷ್ಟ್ರೀಯ ಪೌರ ನೋಂದಣಿ (ಎನ್ಆರ್'ಸಿ)ಯನ್ನು ಜಾರಿಗೆ ತರಲಾಗುತ್ತದೆ ಎಂದು ಬಿಜೆಪಿ ಸಂಸದ ಒಪಿ ಮಥುರ್ ಅವರು ಸೋಮವಾರ ಹೇಳಿದ್ದಾರೆ, 
ಅಸ್ಸಾಂ ಎನ್ಆರ್'ಸಿ ಕರಡು ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಸುಪ್ರೀಂಕೋರ್ಟ್ ನಿರ್ದೇಶನದಂತೆ ಅಸ್ಸಾಂ ನಲ್ಲಿ ಎನ್ಆರ್'ಸಿ ಕರಡು ಜಾರಿಗೆ ತರಲಾಗಿದೆ. ಇದೇ ರೀತಿ 2019ರ ಲೋಕಸಭಾ ಚುನಾವಣೆ ಬಳಿಕ ಇಡೀ ದೇಶದಾದ್ಯಂತ ಕೂಡ ಜಾರಿಗೆ ತರಲಾಗುತ್ತದೆ ಎಂದು ಹೇಳಿದ್ದಾರೆ. 
2019 ಚುನಾವಣೆ ಬಳಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಇಡೀ ದೇಶದಾದ್ಯಂತ ಎನ್ಆರ್'ಸಿ ಜಾರಿಗೆ ತರುತ್ತೇವೆ. ಎನ್ಆರ್'ಸಿ ಪಟ್ಟಿಯಿಂದಾಗಿ ಯಾವುದೇ ಭಾರತೀಯ ಪ್ರಜೆಗಳು ದೇಶವನ್ನು ಬಿಡುವುದಿಲ್ಲ. ದೇಶವನ್ನು ಧರ್ಮಶಾಲೆಯಾಗಲು ನಾವು ಬಿಡುವುದಿಲ್ಲ. ಅಕ್ರಮವಾಗಿ ಗಡಿ ದಾಟುವಿಕೆಯನ್ನು ಕಾನೂನಾತ್ಮಕವಾಗಿ ತಡೆಯುತ್ತೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT