ಆನಂದಿ ಬೆನ್ ಪಟೇಲ್ 
ದೇಶ

ಛತ್ತೀಸ್ ಗಢ ರಾಜ್ಯಪಾಲರಾಗಿ ಆನಂದಿ ಬೆನ್ ಗೆ ಹೆಚ್ಚುವರಿ ಹೊಣೆಗಾರಿಕೆ: ರಾಷ್ಟ್ರಪತಿ ಆದೇಶ

ಮಧ್ಯಪ್ರದೇಶ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಅವರರಿಗೆ ಹೆಚ್ಚುವರಿ ಹೊಣೆಗಾರಿಕೆಯಾಗಿ ಛತ್ತೀಸ್ ಗಢರಾಜ್ಯಪಾಲರ ಹುದ್ದೆ ನೀಡಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಇಂದು ಪ್ರಕಟಣೆ ಹೊರಡಿಸಿದ್ದಾರೆ.

ನವದೆಹಲಿ:  ಮಧ್ಯಪ್ರದೇಶ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಅವರರಿಗೆ ಹೆಚ್ಚುವರಿ ಹೊಣೆಗಾರಿಕೆಯಾಗಿ ಛತ್ತೀಸ್ ಗಢ ರಾಜ್ಯಪಾಲರ ಹುದ್ದೆ ನೀಡಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಇಂದು ಪ್ರಕಟಣೆ ಹೊರಡಿಸಿದ್ದಾರೆ.
ಛತ್ತೀಸ್ ಗಢ ರಾಜ್ಯಪಾಲರಾಗಿದ್ದ ಬಲರಾಮ್ ದಾಸ್ ಟಂಡನ್ ನಿಧನರಾದ ಹಿನ್ನೆಲೆಯಲ್ಲಿ ಆನಂದಿ ಬೆನ್ ಈ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ. ರಾಜ್ಯಕ್ಕೆ ಹೊಸ ರಾಜ್ಯಪಾಲರ ಅಧಿಕೃತ ನೇಮಕವಾಗುವವರೆಗೆ ಆನಂದಿ ಬೆನ್ ಪಟೇಲ್  ಹೆಚ್ಚುವರಿ ಕರ್ತವ್ಯಗಳನ್ನು ನಿರ್ವಹಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆ ತಿಳಿಸಿದೆ.
ಜನಸಂಘ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಬಲರಾಮ್ ಜಿ ದಾಸ್ ಟಂಡನ್ 2014ರ ಜುಲೈನಲ್ಲಿ ಛತ್ತೀಸ್ ಗಢದ ರಾಜ್ಯಪಾಲರನ್ನಾಗಿ ನೇಮಕವಾಗಿದ್ದರು.90 ವರ್ಷದ ಟಂಡನ್ ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT