ಜಯಕುಮಾರ್ 
ದೇಶ

ಕರುಣಾನಿಧಿ ನಿಧನದ ವಿಚಾರದಲ್ಲಿ ರಜನಿಕಾಂತ್ ರಾಜಕೀಯ- ತಮಿಳುನಾಡು ಸಚಿವ

ಡಿಎಂಕೆ ವರಿಷ್ಠ ಕರುಣಾನಿಧಿ ನಿಧನದ ವಿಚಾರದಲ್ಲಿ ಸೂಪರ್ ಸ್ಟಾರ್ ಕಮ್ ರಾಜಕಾರಣಿ ರಜನಿಕಾಂತ್ ರಾಜಕೀಯ ಮಾಡುತ್ತಿದ್ದಾರೆ ಎಂದು ತಮಿಳುನಾಡು ಸಚಿವ ಡಿ. ಜಯ ಕುಮಾರ್ ಆರೋಪಿಸಿದ್ದಾರೆ.

ಚೆನ್ನೈ : ಡಿಎಂಕೆ ವರಿಷ್ಠ ಕರುಣಾನಿಧಿ ನಿಧನದ ವಿಚಾರದಲ್ಲಿ  ಸೂಪರ್ ಸ್ಟಾರ್ ಕಮ್ ರಾಜಕಾರಣಿ  ರಜನಿಕಾಂತ್ ರಾಜಕೀಯ ಮಾಡುತ್ತಿದ್ದಾರೆ ಎಂದು ತಮಿಳುನಾಡು ಸಚಿವ ಡಿ. ಜಯ ಕುಮಾರ್ ಆರೋಪಿಸಿದ್ದಾರೆ.

ರಜನಿಕಾಂತ್ ಅವರಿಗೆ ತಮಿಳುನಾಡು ರಾಜಕೀಯ ಗೊತ್ತಿಲ್ಲ. ಕರುಣಾನಿಧಿ ನಿಧನ ಕುರಿತಂತೆ ರಜನಿಕಾಂತ್ ಅವರ ಹೇಳಿಕೆ ಅಪಕ್ವತೆ ತೋರುತ್ತದೆ. ಅವರಿನ್ನೂ ರಾಜಕೀಯವಾಗಿ ಪಕ್ವಗೊಂಡಿಲ್ಲ ಎಂದು ಅವರು ಟೀಕಿಸಿದ್ದಾರೆ.

ಕರುಣಾನಿಧಿ ಅವರ  ಅಂತ್ಯಸಂಸ್ಕಾರದಲ್ಲಿ ಮುಖ್ಯಮಂತ್ರಿ ಇ. ಕೆ. ಪಳನಿಸ್ವಾಮಿ ಸೇರಿದಂತೆ  ಸಚಿವರೆಲ್ಲರೂ ಪಾಲ್ಗೊಳ್ಳಬೇಕಿತ್ತು ಎಂದು ರಜನಿಕಾಂತ್  ನೀಡಿದ ಹೇಳಿಕೆ ನಂತರ ಜಯಕುಮಾರ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಕರುಣಾನಿಧಿ ಅವರ ಅಂತ್ಯಸಂಸ್ಕಾರದ ವೇಳೆಯಲ್ಲಿ ರಾಜ್ಯಪಾಲ ಬನ್ವಾರಿಲಾಲ್  ಪುರೋಹಿತರಿಂದ ಹಿಡಿದು  ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವರೆಗೂ ದೇಶದ ಹಲವು ಕಡೆಗಳಿಂದ ಅನೇಕ ಮುಖಂಡರು ಭಾಗವಹಿಸಿದ್ದರು. ಆದರೆ,  ತಮಿಳುನಾಡು ಮುಖ್ಯಮಂತ್ರಿ , ಸಂಪುಟ ಬಂದಿಲ್ಲವಲ್ಲ ಎಂದು  ರಜನಿಕಾಂತ್  ಟೀಕಿಸಿದ್ದರು.

ಕರುಣಾನಿಧಿ ನಿಧನ ಹಿನ್ನೆಲೆಯಲ್ಲಿ ದಕ್ಷಿಣ ಭಾರತೀಯ ಕಲಾವಿದರ ಸಂಘ ಆಯೋಜಿಸಿದ್ದ ಶ್ರದ್ದಾಂಜಲಿ ಸಭೆಯಲ್ಲಿ ಮಾತನಾಡಿದ ರಜನಿಕಾಂತ್,  ಡಿಎಂಕೆ ಮೂಲಕ ಕರುಣಾನಿಧಿ ಅನೇಕ  ಚುನಾವಣೆಗಳಲ್ಲಿ ಗೆದ್ದಿದ್ದಾರೆ , ಸೋತಿದ್ದಾರೆ. ವಿಶ್ವದ ಯಾವ ನಾಯಕರು ತಮಿಳುನಾಡುಗೆ ಭೇಟಿ ನೀಡಿದ್ದರೆ ಅವರು ಕರುಣಾನಿಧಿ ಅವರನ್ನು ಭೇಟಿ ಮಾಡುತ್ತಿದ್ದರು. ನಂತರ ಇಲ್ಲಿ ಯಾರನ್ನೂ ಭೇಟಿ ಮಾಡುತ್ತಾರೆ ಅನ್ನೋದು ಗೊತ್ತಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ: SIR ಕುರಿತ ಚರ್ಚೆಗೆ ವಿಪಕ್ಷಗಳಿಂದ ಪಟ್ಟು, ಸ್ಪಷ್ಟನೆ ನೀಡದ ಸರ್ಕಾರ

ಶಿವಮೊಗ್ಗ: ಪಠ್ಯ ಪುಸ್ತಕಗಳಲ್ಲಿ 'ಭಗವದ್ಗೀತೆ' ಸೇರಿಸಲು ಕೇಂದ್ರಕ್ಕೆ ಎಚ್.ಡಿ. ಕುಮಾರಸ್ವಾಮಿ ಒತ್ತಾಯ!

ವಿವಾಹ ಸಮಾರಂಭದಲ್ಲಿ ಅಸಭ್ಯ ವರ್ತನೆಗೆ ವಿರೋಧಿಸಿದ ಕ್ರೀಡಾಪಟುವಿನ ಮೇಲೆ ಕಬ್ಬಿಣದ ರಾಡ್ ನಿಂದ ಗುಂಪು ಹಲ್ಲೆ; ಭೀಕರ ಕೊಲೆ!

ಸಂಸತ್ ಚಳಿಗಾಲದ ಅಧಿವೇಶನ: ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಕಾರ್ಯತಂತ್ರ!

ಎಲ್ ಒಸಿಯಾದ್ಯಂತ ಲಾಂಚ್ ಪ್ಯಾಡ್‌ಗಳು: ಚಳಿಗಾಲಕ್ಕಾಗಿ ಕಾಯುತ್ತಿರುವ ಉಗ್ರರು, ಪಾಕ್ ಗೆ ತಕ್ಕ ಉತ್ತರ ನೀಡಲು ಸೇನೆ ಸಜ್ಜು!

SCROLL FOR NEXT