ಸಾಂದರ್ಭಿಕ ಚಿತ್ರ 
ದೇಶ

ಗಡಿಯಲ್ಲಿ ಪರಸ್ಪರ ಶಾಂತಿಯ ಆಶಯ ವ್ಯಕ್ತಪಡಿಸಿದ ಭಾರತ-ಚೀನಾ ಸೇನೆ

ಭಾರತ ಮತ್ತು ಚೀನಾ ಸೇನೆ ವಾಸ್ತವಿಕ ಗಡಿ ನಿಯಂತ್ರಣ ರೇಖೆ(ಎಲ್ಎಸಿ)ಯ ಬಳಿ ಪರಸ್ಪರ ಶಾಂತಿ ಕಾಪಾಡಿಕೊಳ್ಳುವ ಆಶಯ...

ಶ್ರೀನಗರ: ಭಾರತ ಮತ್ತು ಚೀನಾ ಸೇನೆ ವಾಸ್ತವಿಕ ಗಡಿ ನಿಯಂತ್ರಣ ರೇಖೆ(ಎಲ್ಎಸಿ)ಯ ಬಳಿ ಪರಸ್ಪರ ಶಾಂತಿ ಕಾಪಾಡಿಕೊಳ್ಳುವ ಆಶಯ ವ್ಯಕ್ತಪಡಿಸಿವೆ ಎಂದು ರಕ್ಷಣಾ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆದ ಉಭಯ ದೇಶಗಳ ಗಡಿ ಭದ್ರತಾ ಸಿಬ್ಬಂದಿ ಸಭೆ(ಬಿಪಿಎಂ)ಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶ್ರೀನಗರ ಮೂಲದ ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಲಿಯಾ ಅವರು ಹೇಳಿದ್ದಾರೆ.
ಸಭೆಯಲ್ಲಿ ಬ್ರಿಗೇಡಿಯರ್ ವಿಕೆ ಪುರೋಹಿತ್ ಮತ್ತು ಕರ್ನಲ್ ಅನಿಲ್ ಕುಮಾರ್ ನೇತೃತ್ವದಲ್ಲಿ ಭಾರತೀಯ ಸಿಬ್ಬಂದಿ ಹಾಗೂ ಹಿರಿಯ ಕರ್ನಲ್ ವಾಂಗ್ ಜುನ್ ಕ್ಷಿ ಮತ್ತು ಲೆಫ್ಟಿನೆಂಟ್ ಕರ್ನಲ್ ಲಿ ಮಿಂಗ್ ಜು ಅವರ ನೇತೃತ್ವದಲ್ಲಿ ಚೀನಾ ಸಿಬ್ಬಂದಿ ಭಾಗವಹಿಸಿದ್ದರು ಎಂದು ಕಲಿಯಾ ತಿಳಿಸಿದ್ದಾರೆ.
ಉಭಯ ದೇಶಗಳ ಭದ್ರತಾ ಸಿಬ್ಬಂದಿ ಭಾರತದ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದ ನಂತರ ಬಿಪಿಎಂ ಸಭೆ ಆರಂಭಿಸಲಾಯಿತು. ಸಭೆಯಲ್ಲಿ ಶಾಂತಿ ಕಾಪಾಡಿಕೊಳ್ಳುವ ಆಶಯ, ಪರಸ್ಪರ ಶುಭಾಶಯ ವಿನಿಮಯ ಹಾಗೂ ಧನ್ವವಾದಗಳನ್ನು ತಿಳಿಸಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

SCROLL FOR NEXT