ಕೊಚ್ಚಿ ವಿಮಾನ ನಿಲ್ದಾಣ 
ದೇಶ

ಕೇರಳ ಪ್ರವಾಹ: ಆಗಸ್ಟ್ 18ರವರೆಗೂ ಕೊಚ್ಚಿ ವಿಮಾನ ನಿಲ್ದಾಣ ಸೇವೆ ಸ್ಥಗಿತ

ಕೇರಳದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು, ಇದೇ ಮೊದಲ ಬಾರಿಗೆ ಪ್ರವಾಹದ ಹೊಡೆತಕ್ಕೆ ಸಿಲುಕಿರುವ ಕೊಚ್ಚಿ ವಿಮಾನ ನಿಲ್ದಾಣವನ್ನು 4 ದಿನಗಳ ಕಾಲ ಬಂದ್ ಮಾಡಲಾಗಿದೆ.

ಕೊಚ್ಚಿ:  ಕೇರಳದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು, ಇದೇ ಮೊದಲ ಬಾರಿಗೆ ಪ್ರವಾಹದ ಹೊಡೆತಕ್ಕೆ ಸಿಲುಕಿರುವ ಕೊಚ್ಚಿ ವಿಮಾನ ನಿಲ್ದಾಣವನ್ನು 4 ದಿನಗಳ ಕಾಲ ಬಂದ್ ಮಾಡಲಾಗಿದೆ.
ಮುಂಗಾರು ಮಳೆಗೆ ತತ್ತರಿಸಿ ಹೋಗಿರುವ ಕೇರಳದಲ್ಲಿ  ಈಗಾಗಲೇ 47 ಮಂದಿ ಸಾವಿಗೀಡಾಗಿದ್ದು, 5 ಮಂದಿ ಕಾಣೆಯಾಗಿದ್ದಾರೆ. 10 ಸಾವಿರ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ. ಇದರ ನಡುವೆಯೇ 
ಕೊಚ್ಚಿನ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದ್ದು, ಆಗಸ್ಟ್‌ 18ರ ಮಧ್ಯಾಹ್ನ 2 ಗಂಟೆಯ ವರೆಗೂ ಕೊಚ್ಚಿನ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ತುಂಬಿರುವ ನೀರನ್ನು ಹೊರತೆಗೆಯಲು ಹಾಗೂ ಒಣಗಿಸಲು ಶ್ರಮಿಸುತ್ತಿರುವುದಾಗಿ ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ. 
14 ಜಿಲ್ಲೆಗಳ ಪೈಕಿ 12 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ವಯನಾಡ್‌, ಕಲ್ಲಿಕೋಟೆ, ಕಣ್ಣೂರ್‌, ಕಾಸರಗೂಡು, ಮಲಪ್ಪುರಂ, ಪಾಲಕ್ಕಾಡ್‌, ಇಡುಕ್ಕಿ ಹಾಗೂ ಎರ್ನಾಕುಲಂನಲ್ಲಿ ಆಗಸ್ಟ್‌ 16ರ ವರೆಗೂ ಎಚ್ಚರ ವಹಿಸುವಂತೆ ಸೂಚಿಸಲಾಗಿದೆ.  ಅನೇಕ ಭಾಗಗಳಲ್ಲಿ ನೀರಿನ ಮಟ್ಟದಲ್ಲಿ ಏರಿಕೆಯಿಂದಾಗಿ ಸೇತುಗಳು ಮುಳುಗಡೆಯಾಗಿವೆ ಹಾಗೂ ಕೊಚ್ಚಿ ಹೋಗಿದ್ದು ರೈಲ್ವೆ ಸಂಚಾರ ವ್ಯತ್ಯಯಗೊಂಡಿದೆ. ತಿರುವನಂತಪುರಂ–ಕನ್ಯಾಕುಮಾರಿ ಮಾರ್ಗ ಸೇರಿ ಹಲವು ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT