ಅಟಲ್ ಬಿಹಾರಿ ವಾಜಪೇಯಿ 
ದೇಶ

ಯಮುನಾ ನದಿ ತೀರ ದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅಂತ್ಯಸಂಸ್ಕಾರ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ (93) ಆ.16 ರಂದು ಸಂಜೆ ನಮ್ಮನ್ನು ಅಗಲಿದ್ದು, ದೇಶಾದ್ಯಂತ 7 ದಿನಗಳ ಶೋಕಾಚರಣೆಗೆ ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ (93) ಆ.16 ರಂದು ಸಂಜೆ  ನಮ್ಮನ್ನು ಅಗಲಿದ್ದು, ದೇಶಾದ್ಯಂತ 7 ದಿನಗಳ ಶೋಕಾಚರಣೆಗೆ ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.
ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಸಭೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ರಾಷ್ಟ್ರಿಯ ಶೋಕಾಚರಣೆ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದ್ದು. ಇದೇ ವೇಳೆ ಏಮ್ಸ್ ನಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರವನ್ನು ದೆಹಲಿಯ ಕೃಷ್ಣ ಮೆನನ್ ಮಾರ್ಗ್ ನಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗುತ್ತಿದೆ. 
ವಾಜಪೇಯಿ ಅವರ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗುತ್ತಿದ್ದು, ನಾಳೆ ಸಂಜೆಯೊಳಗೆ ಯಮುನಾ ನದಿ ದಡದಲ್ಲಿರುವ ರಾಜ್ ಘಾಟ್ ನಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತದೆ ಇದಕ್ಕೂ ಮುನ್ನ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ರಾಜ್ ಘಾಟ್ ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮಾರಕ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಒಂದೂ ವರೆ ಎಕರೆ ಮಂಜೂರು ಮಾಡಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT