ಅಟಲ್ ಬಿಹಾರಿ ವಾಜಪೇಯಿ 
ದೇಶ

ಯಮುನಾ ನದಿ ತೀರ ದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅಂತ್ಯಸಂಸ್ಕಾರ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ (93) ಆ.16 ರಂದು ಸಂಜೆ ನಮ್ಮನ್ನು ಅಗಲಿದ್ದು, ದೇಶಾದ್ಯಂತ 7 ದಿನಗಳ ಶೋಕಾಚರಣೆಗೆ ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ (93) ಆ.16 ರಂದು ಸಂಜೆ  ನಮ್ಮನ್ನು ಅಗಲಿದ್ದು, ದೇಶಾದ್ಯಂತ 7 ದಿನಗಳ ಶೋಕಾಚರಣೆಗೆ ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.
ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಸಭೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ರಾಷ್ಟ್ರಿಯ ಶೋಕಾಚರಣೆ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದ್ದು. ಇದೇ ವೇಳೆ ಏಮ್ಸ್ ನಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರವನ್ನು ದೆಹಲಿಯ ಕೃಷ್ಣ ಮೆನನ್ ಮಾರ್ಗ್ ನಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗುತ್ತಿದೆ. 
ವಾಜಪೇಯಿ ಅವರ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗುತ್ತಿದ್ದು, ನಾಳೆ ಸಂಜೆಯೊಳಗೆ ಯಮುನಾ ನದಿ ದಡದಲ್ಲಿರುವ ರಾಜ್ ಘಾಟ್ ನಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತದೆ ಇದಕ್ಕೂ ಮುನ್ನ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ರಾಜ್ ಘಾಟ್ ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮಾರಕ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಒಂದೂ ವರೆ ಎಕರೆ ಮಂಜೂರು ಮಾಡಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!