ಮಾಜಿ ಪ್ರಧಾನಂತ್ರಿ ಅಟಲ್ ಬಿಹಾರಿ ವಾಜಪೇಯಿ 
ದೇಶ

ಮಾಜಿ ಪ್ರಧಾನಿ ವಾಜಪೇಯಿ ಸ್ಥಿತಿ ಗಂಭೀರ: ಅಜಾತ ಶತ್ರುವಿಗಾಗಿ ಪ್ರಾರ್ಥಿಸುತ್ತಿದೆ ಇಡೀ ದೇಶ

ಮಾಜಿ ಪ್ರಧಾನಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅಜಾತ ಶತ್ರುವಿನ ಆರೋಗ್ಯಕ್ಕಾಗಿ ಇಡೀ ದೇಶವೇ ಪ್ರಾರ್ಥನೆ ಸಲ್ಲಿಸುತ್ತಿದೆ...

ನವದೆಹಲಿ: ಮಾಜಿ ಪ್ರಧಾನಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅಜಾತ ಶತ್ರುವಿನ ಆರೋಗ್ಯಕ್ಕಾಗಿ ಇಡೀ ದೇಶವೇ ಪ್ರಾರ್ಥನೆ ಸಲ್ಲಿಸುತ್ತಿದೆ. 
ವಾಜಪೇಯಿಯವರ ಆರೋಗ್ಯ ಸ್ಥಿತಿ ಕುರಿತಂತೆ ಈಗಾಗಲೇ ಹಲವರಲ್ಲಿ ಆತಂಕ ಮನೆ ಮಾಡಿದ್ದು, ಈಗಾಗಿ ಬಿಜೆಪಿ ಅಗ್ರ ನಾಯಕರು ದೆಹಲಿಯ ಏಮ್ಸ್ ಆಸ್ಪತ್ರೆಗೆ ಭೇಟಿ ಮೇರು ನಾಯಕನ ಯೋಗಕ್ಷೇಮ ವಿಚಾರಿಸುತ್ತಿದ್ದಾರೆಂದು ತಿಳಿದುಬಂದಿದೆ. 
ಈಗಾಗಲೇ  ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಸಚಿವರಾದ ಪಿಯೂಷ್ ಗೋಯಲ್, ಸ್ಮೃತಿ ಇರಾನಿ, ಮೀನಾಕ್ಷಿ ಲೇಖಿ ಸೇರಿದಂತೆ ಹಲವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. 
ಸಾಮಾಜಿಕ ಜಾಲತಾಣಗಳಲ್ಲಿ ವಾಜಪೇಯಿಯವರ ಆರೋಗ್ಯ ಶೀಘ್ರಗತಿಯಲ್ಲಿ ಸುಧಾರಿಸಲೆಂದು ಹಲವರು ಹ್ಯಾಷ್'ಟ್ಯಾಗ್ ಗಳೊಂದಿಗೆ ಪ್ರಾರ್ಥಿಸುತ್ತಿದ್ದಾರೆ. ರಾಜಕೀಯ ಮುಖಂಡರಾದ ಶಶಿ ತರೂರ್, ಒಮರ್ ಅಬ್ದುಲ್ಲಾ, ವಿಜಯ್ ಗೋಯಲ್ ಸೇರಿದಂದೆ ಹಲವು ನಾಯಕರು ಟ್ವಿಟರ್ ಮೂಲಕ ವಾಜಪೇಯಿಯವರು ಗುಣಮುಖರಾಗಲೆಂದು ಆಶಿಸುತ್ತಿದ್ದಾರೆ. 
ಈ ನಡುವೆ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿದ್ದು, ಈಗಾಗಲೇ ಏಮ್ಸ್ ಆಸ್ಪತ್ರೆಯ ಹೊರರೋಗಿಗಳ ಭೇಟಿಯನ್ನು ಸಂಪೂರ್ಣ ಬಂದ್ ಮಾಡಿಸಲಾಗಿದೆ. ಆಸ್ಪತ್ರೆಯ ಹೊರ ಹಾಗೂ ಒಳಾಂಗಣದಲ್ಲಿ, ವಾಜಪೇಯಿಯವರ ನಿವಾಸದಲ್ಲಿಯೂ ಕೂಡ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. ಇನ್ನು ಸಾರ್ವಜನಿಕರೂ ಕೂಡ ಏಮ್ಸ್ ರಸ್ತೆಯತ್ತ ಬಾರದಂತೆ ಪೊಲೀಸರು ಸೂಚನೆಗಳನ್ನು ನೀಡುತ್ತಿದ್ದು, ಆಸ್ಪತ್ರೆಯ ಆವರಣದಲ್ಲಿ ಆತಂಕದ ವಾತಾವರಣ ಮನೆ ಮಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕರ್ನಾಟಕ ಮೂಲದ ವ್ಯಕ್ತಿಯ ಶಿರಚ್ಛೇದ ಪ್ರಕರಣ: ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ತೋರುವ ಕಾಲ ಮುಗಿದಿದೆ- ಟ್ರಂಪ್

ಗ್ರೇಟರ್ ಬೆಂಗಳೂರು ಚುನಾವಣೆಗೆ ಭದ್ರ ಬುನಾದಿ ಹಾಕುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್!

Asia Cup 2025: ಪಾಕ್ ವಿರುದ್ಧದ ಗೆಲುವನ್ನು ಪಹಲ್ಗಾಮ್ ಸಂತ್ರಸ್ತರು, ಸೇನಾಪಡೆಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್! Video

ರಾಜಕೀಯ ಲಾಭಕ್ಕಾಗಿ 'ಮೃದು ಹಿಂದುತ್ವ'ಕ್ಕೆ ಕೈ ಹಾಕುತ್ತಿರುವ ಡಿ.ಕೆ ಶಿವಕುಮಾರ್ - ಡಾ. ಪರಮೇಶ್ವರ್?

Asia CUP 2025: ಭಾರತ ಗೆಲುತ್ತಿದ್ದಂತೆಯೇ ' post Match presentation'ತೊರೆದ ಪಾಕ್ ನಾಯಕ; ಇದೇ ಕಾರಣ!

SCROLL FOR NEXT