ಸಂಗ್ರಹ ಚಿತ್ರ 
ದೇಶ

ಎದೆಮಟ್ಟ ನೀರಿನಲ್ಲಿ ನಿಂತು ರಾಷ್ಟ್ರಧ್ವಜಕ್ಕೆ ಸೆಲ್ಯೂಟ್ ಹೊಡೆದಿದ್ದ ಬಾಲಕನ ಹೆಸರು ಎನ್‌ಆರ್‌ಸಿ ಪಟ್ಟಿಯಲ್ಲಿಲ್ಲ!

ಪ್ರವಾಹದ ನೀರು ಎದೆಮಟ್ಟಕ್ಕೆ ಬಂದಿದ್ದರೂ ಪುಟ್ಟ ಮಕ್ಕಳಿಬ್ಬರು ರಾಷ್ಟ್ರಧ್ವಜಕ್ಕೆ ವಂದನೆ ಸಲ್ಲಿಸಿದ್ದ ಫೋಟೋವೊಂದು ಕಳೆದ ವರ್ಷ ಸ್ವಾತಂತ್ರ್ಯೋತ್ಸವ ದಿನ ವೈರಲ್ ಆಗಿತ್ತು. ಈ ಚಿತ್ರ ಮತ್ತೆ ಗಮನ ಸೆಳೆದಿದೆ...

ನವದೆಹಲಿ: ಪ್ರವಾಹದ ನೀರು ಎದೆಮಟ್ಟಕ್ಕೆ ಬಂದಿದ್ದರೂ ಪುಟ್ಟ ಮಕ್ಕಳಿಬ್ಬರು ರಾಷ್ಟ್ರಧ್ವಜಕ್ಕೆ ವಂದನೆ ಸಲ್ಲಿಸಿದ್ದ ಫೋಟೋವೊಂದು ಕಳೆದ ವರ್ಷ ಸ್ವಾತಂತ್ರ್ಯೋತ್ಸವ ದಿನ ವೈರಲ್ ಆಗಿತ್ತು. ಈ ಚಿತ್ರ ಮತ್ತೆ ಗಮನ ಸೆಳೆದಿದೆ. 
ಕಳೆದ ಸ್ವಾತಂತ್ರೋತ್ಸವದ ದಿನ ಅಸ್ಸಾಂ ಪ್ರವಾಹದಿಂದ ತತ್ತರಿಸಿತ್ತು. ಇನ್ನು ಧುಬ್ರಿ ಜಿಲ್ಲೆಯ ಬರ್ ಕಾಲಿಯಾ ನಕ್ಸರಾ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯೊಂದರ ಮುಖ್ಯೋಪಾಧ್ಯಾಯ ತಾಜೆನ್ ಸಿಕ್ ದೆರ್, ಸಹಾಯಕ ಶಿಕ್ಷಕ ನೃಪೆನ್ ರಬ್ಬಾ ಹಾಗೂ ಇಬ್ಬರು ಪುಟಾಣಿ ಮಕ್ಕಳು ಪ್ರವಾಹದ ನೀರು ಎದೆಮಟ್ಟಕ್ಕೆ ಬಂದಿದ್ದರೂ ಧೃತಿಗೆಡದೆ ರಾಷ್ಟ್ರಧ್ವಜಕ್ಕೆ ವಂದನೆ ಸಲ್ಲಿಸಿದ್ದರು. ಈ ಚಿತ್ರದಲ್ಲಿನ ಒಬ್ಬ ಬಾಲಕನ ಹೆಸರು ಎನ್‌ಆರ್‌ಸಿ ಪಟ್ಟಿಯಲ್ಲಿಲ್ಲ ಎಂದು ವರದಿಯಾಗಿದೆ. 
ಇಬ್ಬರು ಮಕ್ಕಳ ಪೈಕಿ 9 ವರ್ಷದ ಹೈದರ್ ಖಾನ್ ಹೆಸರು ಎನ್‌ಆರ್‌ಸಿ ಪಟ್ಟಿಯಲ್ಲಿಲ್ಲ ಮತ್ತೊಬ್ಬ ಬಾಲಕ ಹೈದರ್ ನ ಸಂಬಂಧಿ ಜೈರುಲ್ ಖಾನ್. ಹೈದರ್ ನ ಕುಟುಂಬದ ಇತರ ಸದಸ್ಯರ ಹೆಸರುಗಳು ಪಟ್ಟಿಯಲ್ಲಿದ್ದರೂ ಆತನ ಹೆಸರಿಲ್ಲ. ಹೈದರ್ ನ ತಾಯಿ ಜ್ಯೊಗೊನ್ ಖಾತುನ್ ಮನೆಕೆಲಸ ಮಾಡಿ ಜೀವನ ನಡೆಸುತ್ತಿದ್ದಾರೆ. 
ಇನ್ನು ಹೈದರ್ ನನ್ನು ಭಾರತೀಯ ಎಂದು ಘೋಷಿಸುವಂತೆ ಆತನ ತಾಯಿ ಮತ್ತು ಗ್ರಾಮಸ್ಥರು ಸರ್ಕಾರವನ್ನು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT