ಸುಲ್ತಾನ್ ಘರ್ ಜಲಪಾತ 
ದೇಶ

ಮಧ್ಯ ಪ್ರದೇಶ: ಪ್ರವಾಹಕ್ಕೆ ಸಿಕ್ಕು 11 ಮಂದಿ ಸಾವು,, 30ಕ್ಕೂ ಹೆಚ್ಚು ಜನರು ಅಪಾಯದಲ್ಲಿ!

ಗ್ವಾಲಿಯರ್ನ ಶಿವಪುರಿಯಲ್ಲಿನ ಸುಲ್ತಾನ್ ಘರ್ ಜಲಪಾತದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಪ್ರಯತ್ನಗಳು ನಡೆಯುತ್ತಿದೆ ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಗ್ವಾಲಿಯರ್(ಮಧ್ಯ ಪ್ರದೇಶ):ಗ್ವಾಲಿಯರ್ ನ ಶಿವಪುರಿಯಲ್ಲಿನ ಸುಲ್ತಾನ್ ಘರ್ ಜಲಪಾತದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಪ್ರಯತ್ನಗಳು ನಡೆಯುತ್ತಿದೆ ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಪ್ರವಾಸಕ್ಕೆ ಆಗಮಿಸಿದ್ದ 11  ಅಣೆಕಟ್ಟೆಯಿಂದ ಹಠಾತ್ತನೇ ನಿರು ಹೊರಬಿಟ್ಟದ್ದರಿಂದ ಧಿಡೀರನೇ ನೀರಿನ ಮಟ್ಟ ಏರಿಕೆಯಾಗಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಚೌಹಾಣ್ ಈ ಹೇಳಿಕೆ ನಿಡಿದ್ದಾರೆ.
ಏಳು ಜನರನ್ನು ಈಗಾಗಲೇ ರಕ್ಷಿಸಲಾಗಿದೆ, ಸುಮಾರು 30 ರಿಂದ 40 ಜನರು ಅಪಾಯದಲ್ಲಿ ಸ್ಲುಕಿರುವ ವರದಿ ಬಂದಿದೆ. ಅಪಾಯದಲ್ಲಿರುವವರನ್ನು ರಕ್ಷಿಸುವ ಯತ್ನ ನಡೆಯುತ್ತಿದೆ, ನಾನು ರಕ್ಷಣಾ ತಂಡದೊಡನೆ ಸಂಪರ್ಕದಲ್ಲಿದ್ದೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಕೂಡ ಪರಿಸ್ಥಿತಿ ಪರಾಮರ್ಶೆಗಾಗಿ ಸ್ಥಳಕ್ಕೆ ಆಗಮಿಸಿದ್ದಾರೆ.
ಕಾಣೆಯಾದವರನ್ನು ಪತ್ತೆ ಹಚ್ಚಲು ಒಂದು ಹೆಲಿಕಾಪ್ಟರ್ ಅನ್ನು ಬಳಸಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಗಾಗಿ ಮಧ್ಯಪ್ರದೇಶ ಪೊಲೀಸರು ಕೂಡ ಸ್ಥಳದಲ್ಲಿದ್ದಾರೆ
ಸುಲ್ತಾನ್ ಘರ್ ಜಲಪಾತವು ಶಿವಪುರಿಯಲ್ಲಿ ಬಂಡೆಗಳ ಮಧ್ಯೆ ಹರಿಯುವ ಸುಂದರ ಜಲಪಾತವಾಗಿದ್ದು ಜನಪ್ರಿಯ ಪಿಕ್ನಿಕ್ ತಾಣವೆನಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT