ಸುಲ್ತಾನ್ ಘರ್ ಜಲಪಾತ 
ದೇಶ

ಮಧ್ಯ ಪ್ರದೇಶ: ಪ್ರವಾಹಕ್ಕೆ ಸಿಕ್ಕು 11 ಮಂದಿ ಸಾವು,, 30ಕ್ಕೂ ಹೆಚ್ಚು ಜನರು ಅಪಾಯದಲ್ಲಿ!

ಗ್ವಾಲಿಯರ್ನ ಶಿವಪುರಿಯಲ್ಲಿನ ಸುಲ್ತಾನ್ ಘರ್ ಜಲಪಾತದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಪ್ರಯತ್ನಗಳು ನಡೆಯುತ್ತಿದೆ ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಗ್ವಾಲಿಯರ್(ಮಧ್ಯ ಪ್ರದೇಶ):ಗ್ವಾಲಿಯರ್ ನ ಶಿವಪುರಿಯಲ್ಲಿನ ಸುಲ್ತಾನ್ ಘರ್ ಜಲಪಾತದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಪ್ರಯತ್ನಗಳು ನಡೆಯುತ್ತಿದೆ ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಪ್ರವಾಸಕ್ಕೆ ಆಗಮಿಸಿದ್ದ 11  ಅಣೆಕಟ್ಟೆಯಿಂದ ಹಠಾತ್ತನೇ ನಿರು ಹೊರಬಿಟ್ಟದ್ದರಿಂದ ಧಿಡೀರನೇ ನೀರಿನ ಮಟ್ಟ ಏರಿಕೆಯಾಗಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಚೌಹಾಣ್ ಈ ಹೇಳಿಕೆ ನಿಡಿದ್ದಾರೆ.
ಏಳು ಜನರನ್ನು ಈಗಾಗಲೇ ರಕ್ಷಿಸಲಾಗಿದೆ, ಸುಮಾರು 30 ರಿಂದ 40 ಜನರು ಅಪಾಯದಲ್ಲಿ ಸ್ಲುಕಿರುವ ವರದಿ ಬಂದಿದೆ. ಅಪಾಯದಲ್ಲಿರುವವರನ್ನು ರಕ್ಷಿಸುವ ಯತ್ನ ನಡೆಯುತ್ತಿದೆ, ನಾನು ರಕ್ಷಣಾ ತಂಡದೊಡನೆ ಸಂಪರ್ಕದಲ್ಲಿದ್ದೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಕೂಡ ಪರಿಸ್ಥಿತಿ ಪರಾಮರ್ಶೆಗಾಗಿ ಸ್ಥಳಕ್ಕೆ ಆಗಮಿಸಿದ್ದಾರೆ.
ಕಾಣೆಯಾದವರನ್ನು ಪತ್ತೆ ಹಚ್ಚಲು ಒಂದು ಹೆಲಿಕಾಪ್ಟರ್ ಅನ್ನು ಬಳಸಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಗಾಗಿ ಮಧ್ಯಪ್ರದೇಶ ಪೊಲೀಸರು ಕೂಡ ಸ್ಥಳದಲ್ಲಿದ್ದಾರೆ
ಸುಲ್ತಾನ್ ಘರ್ ಜಲಪಾತವು ಶಿವಪುರಿಯಲ್ಲಿ ಬಂಡೆಗಳ ಮಧ್ಯೆ ಹರಿಯುವ ಸುಂದರ ಜಲಪಾತವಾಗಿದ್ದು ಜನಪ್ರಿಯ ಪಿಕ್ನಿಕ್ ತಾಣವೆನಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT