ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ 
ದೇಶ

ವಾಜಪೇಯಿ ಆರೋಗ್ಯ ಮತ್ತಷ್ಟು ಕ್ಷೀಣ: ಜೊತೆಗಿದ್ದ ದಿನಗಳ ನೆನೆದು ಭಾವುಕರಾದ ಒಡಿಶಾ ಸಿಎಂ

ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿರುವ ಹಿನ್ನಲೆಯಲ್ಲಿ ಜೊತೆಗಿದ್ದ ದಿನಗಳನ್ನು ನೆನೆದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಭಾವುಕರಾದರು...

ಭುವನೇಶ್ವರ್: ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿರುವ ಹಿನ್ನಲೆಯಲ್ಲಿ ಜೊತೆಗಿದ್ದ ದಿನಗಳನ್ನು ನೆನೆದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಭಾವುಕರಾದರು. 
ವಾಜಪೇಯಿ ಸ್ಥಿತಿ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಪಟ್ನಾಯಕ್ ಅವರು ಹಳೆಯ ದಿನಗಳನ್ನು ನೆನೆದು ಭಾವುಕರಾದರು. 
ವಾಜಪೇಯಿ ಅತ್ಯುತ್ತಮ ನಾಯಕ. ಅವರೊಂದಿಗೆ ಕೆಲಸ ಮಾಡುವುದು ಯಾವಾಗಲೂ ಅತ್ಯುತ್ತಮವಾದ ಅನುಭವ. ಶೀಘ್ರದಲ್ಲಿಯೇ ರಾಜಧಾನಿ ದೆಹಲಿಗೆ ಭೇಟಿ ನೀಡುತ್ತೇನೆಂದು ಹೇಳಿದ್ದಾರೆ. 
ನವೀನ್ ಪಟ್ನಾಯಕ್ ಹಾಗೂ ವಾಜಪೇಯಿಯವರು ಬಲವಾದ ರಾಜಕೀಯ ಬಾಂಧವ್ಯವನ್ನು ಹೊಂದಿದ್ದರು. ಪಟ್ನಾಯಕ್ ಅವರು ಬಿಜು ಜನತಾ ದಳ ಪಕ್ಷ, ವಾಜಪೇಯಿ ನೇತೃತ್ವದ ಎನ್'ಡಿಎ ಸರ್ಕಾರದೊಂದಿಗೆ ಕೈಜೋಡಿಸಿ 1998-2004ರವರೆಗೂ ಸರ್ಕಾರ ನಡೆಸಿತ್ತು. ವಾಜಪೇಯಿಯವರ ಸಂಪುಟದಲ್ಲಿ ಪಟ್ನಾಯಕ್ ಅವರು ಗಣಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT