ವಾಜಪೇಯಿ ಅಂತಿಮ ಯಾತ್ರೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ 
ದೇಶ

'ಸ್ಮೃತಿ ಸ್ಥಳ'ದತ್ತ ವಾಜಪೇಯಿ ಪಾರ್ಥೀವ ಶರೀರ; ಮೆರವಣಿಗೆ ಜೊತೆ ನಡೆದು ಸಾಗಿದ ಪ್ರಧಾನಿ ಮೋದಿ

ರಾಜ್ ಘಾಟ್ ಬಳಿ ಇರುವ ರಾಷ್ಟ್ರೀಯ ಸ್ಮೃತಿ ಸ್ಥಳದತ್ತ ಹೊರಟ ಮಾಜಿ ಪ್ರಧಾನಿ ವಾಜಪೇಯಿ ಅವರ ಪಾರ್ಥಿವ ಶರೀರ ಮೆರವಣಿಗೆ ವಾಹನದ ಜೊತೆಗೆ ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಡೆದು ಸಾಗಿದರು.

ನವ ದೆಹಲಿ:ರಾಜ್ ಘಾಟ್ ಬಳಿ ಇರುವ ರಾಷ್ಟ್ರೀಯ ಸ್ಮೃತಿ ಸ್ಥಳದತ್ತ ಹೊರಟ ಮಾಜಿ ಪ್ರಧಾನಿ ವಾಜಪೇಯಿ ಅವರ ಪಾರ್ಥಿವ ಶರೀರ ಮೆರವಣಿಗೆ ವಾಹನದ ಜೊತೆಗೆ ಪ್ರಧಾನಿ ನರೇಂದ್ರಮೋದಿ   ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಡೆದು ಸಾಗಿದರು.

ಬಿಜೆಪಿ ಕೇಂದ್ರ ಕಚೇರಿಯಿಂದ ಹೊರಟ ಪಾರ್ಥಿವ ಶರೀರದ  ಅಂತಿಮ ಯಾತ್ರೆಯಲ್ಲಿ  ಲಕ್ಷಾಂತರ ಜನರ ಮಧ್ಯೆಯೂ ಪ್ರಧಾನಿ ನರೇಂದ್ರಮೋದಿ  ತನ್ನ ನೆಚ್ಚಿನ ಗುರುವಿನ ಅಂತಿಮ ಯಾತ್ರೆಯಲ್ಲಿ ನಡೆದು ಸಾಗುವ ಮೂಲಕ  ಗುರು- ಶಿಷ್ಯರ ನಡುವಿನ ಸಂಬಂಧವನ್ನು ಜಗತ್ತಿಗೆ ಸಾರಿ ಹೇಳಿದರು.
ವಾಜಪೇಯಿ ಪಾರ್ಥಿವ ಶರೀರದ ವಾಹನದ ಹಿಂದೆ ಪ್ರಧಾನಿ ನರೇಂದ್ರಮೋದಿ ಅವರ ಜೊತೆಗೆ
ಸಂಪುಟ ಸಚಿವರು, ಬಿಜೆಪಿ ಪಕ್ಷದ ಹಿರಿಯ ನಾಯಕರು, ವಾಜಪೇಯಿ ಅವರ ಅಪಾರ ಸಂಖ್ಯೆಯ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ನಡೆದು ಸಾಗಿದರು.
ಜವಾಹರಲಾಲ್ ನೆಹರೂ ಅವರ ಸಮಾಧಿ  ಶಾಂತಿವನ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಸಮಾಧಿ ವಿಜಯ್ ಘಾಟ್  ಬಳಿ ಇರುವ ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ಸಂಜೆ 4 ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ. 2012ರಲ್ಲಿ ನಿಧನರಾಗಿದ್ದ ಮಾಜಿ ಪ್ರಧಾನಿ ಐಕೆ ಗುಜ್ರಾಲ್ ಅವರ ಅಂತ್ಯಸಂಸ್ಕಾರವನ್ನು ರಾಷ್ಟ್ರೀಯ ಸ್ಮೃತಿ ಸ್ಥಳದ ಬಳಿಯೇ  ನಡೆಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆಗೆ ಪ್ರವಾಹ ಭೀತಿ: ಚೆನಾಬ್, ಝೇಲಂನಲ್ಲಿ ಅಪಾಯದ ಮಟ್ಟ ಮೀರಿದ ನೀರು; ಶಾಲೆಗಳಿಗೆ ರಜೆ, ಹೆದ್ದಾರಿ ಬಂದ್

ಅಮೆರಿಕಾ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕ: ಸುಂಕಾಸ್ತ್ರ ಕ್ರಮಕ್ಕೆ ಟ್ರಂಪ್ ಸಮರ್ಥನೆ

ನಿಮ್ಮ-ಭಾರತ ಸಂಬಂಧಕ್ಕೆ ನಮ್ಮ ತಕರಾರಿಲ್ಲ ಆದರೆ, ನಮ್ಮ ಬಾಂಧವ್ಯ ಗಟ್ಟಿಗೊಳಿಸೋಣ: ರಷ್ಯಾಗೆ ಪಾಕ್ ಮನವಿ

ಎರಡು ಗಂಟೆ ಮಳೆ - 20 ಕಿ.ಮೀ. ಟ್ರಾಫಿಕ್ ಜಾಮ್: ಮಿಲೇನಿಯಮ್ ಸಿಟಿ ನಗರಾಭಿವೃದ್ಧಿ ಟ್ರಿಪಲ್ ಎಂಜಿನ್ ಮಾದರಿ: BJP ಕಾಲೆಳೆದ ಕಾಂಗ್ರೆಸ್!

'ಸ್ವಾತಂತ್ರ್ಯ ಹೋರಾಟದಲ್ಲಿ ಯಾರ ಮನೆ ನಾಯಿ ಭಾಗವಹಿಸಿತ್ತೆಂದು ಬಹಿರಂಗ ಪಡಿಸಲಿ: ರಾಜ್ಯ ಸರ್ಕಾರದಲ್ಲಿ ಬಚ್ಚಲುಬಾಯಿ ಮಂತ್ರಿಗಳು!'

SCROLL FOR NEXT