ಸುಪ್ರೀಂ ಕೋರ್ಟ್ 
ದೇಶ

ತೂತುಕುಡಿ ಸ್ಟೆರ್ಲೈಟ್ ಹಣೆಬರಹ ಎನ್ ಜಿಟಿ ನಿರ್ಧರಿಸುತ್ತೆ: ಸುಪ್ರೀಂ ಕೋರ್ಟ್

ಬಂದ್ ಆಗಿರುವ ತಮಿಳುನಾಡಿನ ತೂತುಕುಡಿಯಲ್ಲಿರುವ ವೇದಾಂತ ಗ್ರೂಪ್ ನ ಸ್ಟೆರ್ಲೈಟ್ ತಾಮ್ರ ಸಂಸ್ಕರಣಾ ಘಟಕದ...

ನವದೆಹಲಿ: ಬಂದ್ ಆಗಿರುವ ತಮಿಳುನಾಡಿನ ತೂತುಕುಡಿಯಲ್ಲಿರುವ ವೇದಾಂತ ಗ್ರೂಪ್ ನ ಸ್ಟೆರ್ಲೈಟ್ ತಾಮ್ರ ಸಂಸ್ಕರಣಾ ಘಟಕದ ಆಡಳಿತ ವಿಭಾಗ ಬಳಕಗೆ ಅವಕಾಶ ಕಲ್ಪಿಸಿದ ರಾಷ್ಟ್ರೀಯ ಹಸಿರು ಪೀಠ(ಎನ್ ಜಿಟಿ)ದ ಆದೇಶ ಪ್ರಶ್ನಿಸಿದ ತಮಿಳುನಾಡು ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ತಮಿಳುನಾಡು ಸರ್ಕಾರದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿಗಳಾದ ಆರ್ ಎಫ್ ನಾರಿಮನ್ ಹಾಗೂ ಇಂದು ಮಲ್ಹೋತ್ರಾ ಅವರು, ತಾಮ್ರ ಘಟಕ ಖಾಯಂ ಬಂದ್ ಕುರಿತು ಮತ್ತು ರಾಜ್ಯ ಸರ್ಕಾರ ಪ್ರಸ್ತಾಪಿಸಿರುವ ಸಂರಕ್ಷಣೆಯ ಕುರಿತು ಎನ್ ಜಿಟಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದೆ.
ಅರ್ಹತೆ ಆಧಾರದ ಮೇಲೆ ಎನ್ ಜಿಟಿ ಪ್ರಕರಣದ ವಿಚಾರಣೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ. ರಾಜ್ಯ ಸರ್ಕಾರ ಮುಕ್ತವಾಗಿ ತನ್ನ ವಾದ ಮಂಡಿಸಬಹುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಎನ್ ಜಿಟಿ ಕಳೆದ ಆಗಸ್ಟ್ 9ರಂದು ವೇದಾಂತ ಗ್ರೂಪ್ ಗೆ ಸ್ಟೆರ್ಲೈಟ್ ತಾಮ್ರ ಘಟಕದ ಆಡಳಿತ ವಿಭಾಗ ಪ್ರವೇಶಿಸಲು ಅವಕಾಶ ನೀಡಿತ್ತು. ಅಲ್ಲದೆ ಆಡಳಿತ ವಿಭಾಗ ಬಳಕೆಗೆ ಅವಕಾಶ ನೀಡಿದೆ ಪರಿಸರಕ್ಕೆ ಯಾವುದೇ ಹಾನಿ ಆಗಲ್ಲ ಎಂದಿತ್ತು.
ತೂತುಕುಡಿ ನಿವಾಸಿಗಳ ಹಿಂಸಾತ್ಮಕ ಪ್ರತಿಭಟನೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಕಳೆದ ಮೇ ತಿಂಗಳಲ್ಲಿ ಸ್ಟೆರ್ಲೈಟ್ ತಾಮ್ರ ಕಂಪನಿಗೆ ವಿದ್ಯುತ್ ಸ್ಥಗಿತಗೊಳಿಸುವ ಮೂಲಕ ಘಟಕವನ್ನು ಬಂದ್ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT