ಅಟಲ್ ಬಿಹಾರಿ ವಾಜಪೇಯಿ 
ದೇಶ

ದೇಶದ ಪವಿತ್ರ ನದಿಗಳಲ್ಲಿ ಅಟಲ್ ಚಿತಾಭಸ್ಮ ಸಮರ್ಪಣೆ

ಗುರುವಾರ ನಿಧನರಾದ ಭಾರತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಚಿತಾಭಸ್ಮವನ್ನು ಪವಿತ್ರ ನದಿಗಳಲ್ಲಿ ಸಮರ್ಪಿಸಲು ಬಿಜೆಪಿ ಮುಂದಾಗಿದ್ದು.....

ಲಖನೌ: ಗುರುವಾರ ನಿಧನರಾದ ಭಾರತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ  ಚಿತಾಭಸ್ಮವನ್ನು  ಪವಿತ್ರ ನದಿಗಳಲ್ಲಿ ಸಮರ್ಪಿಸಲು ಬಿಜೆಪಿ  ಮುಂದಾಗಿದ್ದು ಉತ್ತರಪ್ರದೇಶದ ಎಲ್ಲಾ ಜಿಲ್ಲೆಗಳಲ್ಲಿನ ನದಿಗಳಲ್ಲಿ ಅಟಲ್ ಚಿತಾಭಸ್ಮವನ್ನು ಸಮರ್ಪಿಸುವುದಾಗಿ ಉತ್ತರ ಪ್ರದೇಶ ಸರ್ಕಾರ ಹೇಳಿದೆ.
ಗಂಗಾ, ಯಮುನಾ, ಬ್ರಹ್ಮಪುತ್ರ ಸೇರಿದಂತೆ ದೇಶದ ವಿವಿಧ ಪವಿತ್ರ ನದಿಗಳಲ್ಲಿ ಚಿತಾಭಸ್ಮವನ್ನು ಸಮರ್ಪಿಸಲಾಗುವುದು.ಎಂದು ಪಕ್ಷದ ಮೂಲಗಳು ಹೇಳಿದೆ.
ಉತ್ತರ ಪ್ರದೇಶ ಸರಕಾರವು 75 ಜಿಲ್ಲೆಗಳನ್ನು ಪಟ್ಟಿ ಮಾಡಿದೆ ಮತ್ತು ಭಾರತೀಯ ಜನತಾ ಪಕ್ಷದ ನಾಯಕನ ಬೂದಿಯನ್ನು ಸಣ್ಣ ಹಾಗೂ ದೊಡ್ಡ ನದಿಗಳಲ್ಲಿ ತೇಲಿ ಬಿಡಲಾಗುತ್ತದೆ ಎಂದು ಹೇಳಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ವಿಚಾರವನ್ನು ತಿಳಿಸಿದ್ದು  ಏಕೆಂದರೆ ಉತ್ತರ ಪ್ರದೇಶ ವಾಜಪೇಯಿಯವರ 'ಕರ್ಮಭೂಮಿ'  ಅವರು ಕೆಲಸ ಮಾಡಿದ್ದ ಸ್ಥಳ, ಇಲ್ಲಿನ ಜನರು ತಮ್ಮ ನಾಯಕನ ಅಂತಿಮ ಯಾನದ ಭಾಗವಾಗಲು ಬಯಸುತ್ತಾರೆ ಎಂದರು.
ವಾಜಪೇಯಿ ಸತತ ಐದು ಬಾರಿ ಉತ್ತರ ಪ್ರದೇಶದ ಲಖನೌ ನಿಂದ ಲೋಕಸಭೆಯನ್ನು ಪ್ರತಿನಿಧಿಸಿದ್ದರು. ಅವರು 1991, 1996, 1998, 1999 ಮತ್ತು 2004ರಲ್ಲಿ ಲಖನೌನಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.
ಭಾರತೀಯ ಜನತಾ  ಪಕ್ಷದ ಲಖನೌ ಘಟಕದಲ್ಲಿ ಆಗಸ್ಟ್ 21 ರಂದು ಲಖನೌ ಪ್ರಸ್ತುತ ಸಂಸದರಾದ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತಿತರೆ ಮುಖಂಡರು ವಾಜಪೇಯಿಯವರಿಗೆ ಅಂತಿಮ ಗೌರವ ಸಲ್ಲಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!